ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ಕ್ರೂರ ಪ್ರಾಣಿ

picture

ಕಾಡಿನಲ್ಲೊಂದು ಸುಂದರವಾದ ಮರ.ಕಾಡು ಪ್ರಾಣಿಗಳೆಲ್ಲಾ ಒಮ್ಮೊಮ್ಮೆ ಬಂದು ಆ ಮರದಡಿ ವಿಶ್ರಮಿಸಿ ಹೋಗುತ್ತಿದ್ದವು.ಹಾಗೇ ಅದೇ ಮರದಡಿಯಲ್ಲೇ ಮಲ-ಮೂತ್ರ ವಿಸರ್ಜನೆಯನ್ನೂ ಮಾಡಿ ಹೋಗುತ್ತಿದ್ದವು.ಅದರಿಂದ ಆ ಮರಕ್ಕೆ ಬೇಸರವಾಗಿತ್ತು.ಒಂದು ದಿನ `ನನ್ನ ಬಳಿ ಯಾವ ಪ್ರಾಣಿಗಳು ಬಾರದಂತೆ ಮಾಡುತ್ತೇನೆ,ನನ್ನ ಈ ಉದ್ದನೆಯ ಟೊಂಗೆಯಿಂದ ಬೀಸಿ ಆ ಪ್ರಾಣಿಗಳನ್ನು ಓಡಿಸುತ್ತೇನೆ'ಎಂದು ತನ್ನ ಪಕ್ಕದ ಮರಗಳಿಗೆ ಹೇಳಿತು.ಅವು ಹಾಗೆ ಮಾಡಬೇಡ ಎಂದು ಎಷ್ಟು ಬೇಡಿದರೂ ಈ ಮರ ಕೇಳಲಿಲ್ಲ .ಆ ದಿನದಿಂದ ವಿಶ್ರಾಂತಿಗೆ ಬಂದ ಎಲ್ಲ ಪ್ರಾಣಿಗಳಿಗೂ ತನ್ನ ಟೊಂಗೆಯಿಂದ ಬಲವಾಗಿ ಬೀಸಿ ಬಾರಿಸಿತು,ಪ್ರಾಣಿಗಳು ಹೆದರಿ ಓಡಿವವು.ಮುಂದೆ ಯಾವ ಪ್ರಾಣಿಗಳೂ ಹತ್ತಿರ ಸುಳಿಯಲಿಲ್ಲ. ಒಂದು ದಿನ ಮುಂಜಾನೆ ನಾಲ್ಕು ಜನ ಅಲ್ಲಿಗೆ ಬಂದರು. ಮರವು ಓ ಇವರೂ ಪ್ರಾಣಿಗಳಿಗೆ ಹೆದರಿ ಇಲ್ಲಿ ಬಂದಿರಬೇಕು,ವಿಶ್ರಾಂತಿ ಪಡೆಯಲಿ ಇಂದು ಸುಮ್ಮನೆ ನೋಡುತ್ತಿತ್ತು.ಆದರೆ ಬಂದವರು ಮರ ಕಡಿದು ಸಾಗಿಸುವವರು,ಅವರು ತಮ್ಮ ಕೆಲಸವನ್ನು ಮೊದಲು ಅದೇ ಮರದಿಂದಲೇ ಶುರು ಮಾಡಿಕೊಂಡರು.

ನೀತಿ 1:`ಕುರುಡು ಕಣ್ಣಿಗಿಂತ ಮೆಳ್ಳಗಣ್ಣೇ ವಾಸಿ" ಎನ್ನುವ ಗಾದೆಗೆ ಹೋಲುತ್ತದೆ.

ನೀತಿ 2: ಮನುಜನೇ ಎಲ್ಲರಿಗಿಂತ ಕ್ರೂರ ಪ್ರಾಣಿ


 


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಕನಕಾಪುರ ನಾರಾಯಣ

ಕನ್ನಡ ಕಲಿಸುವುದು, ಕನ್ನಡ ಸಂಘಟನೆ, ಸಮಾಜ ಸೇವೆ ಮುಂದಾಳತ್ವ, ಕಥೆ, ಲೇಖನ ಬರಹಗಳು, ಸಂಘ ಸಂಸ್ಥೆ ಕಾರ್ಯಕ್ರಮ ನಿರ್ವಹಣೆ ಇವೇ ಮುಂತಾದ ಕೆಲಸ  à²¬à²¿à²¡à³à²µà²¿à²¨à²²à³à²²à²¿ ತೊಡಗಿಸಿಕೊಂಡಿದ್ದು. ಸಂಸಾರದಲ್ಲಿ ಸತಿಯ ಪ್ರೀತಿ ಮತ್ತು ಎರಡು ಮಕ್ಕಳ ತಂದೆತನದ ಜವಾಬ್ದಾರಿ.

ನೂರಾರು ಸಣ್ಣಕಥೆಗಳನ್ನು ಈ ವೆಬ್ಸೈಟ್ ನಲ್ಲಿ ಬರೆದಿರುವುದಲ್ಲದೇ, ಸ್ವಂತ ಅನುಭವ ಅಭಿಪ್ರಾಯ ವ್ಯಕ್ತಪಡಿಸಲು http://chakkemoggu.wordpress.com/ à²Žà²‚ಬ ಬ್ಲಾಗ್ ನಲ್ಲೂ ಇವರ ಲೇಖನ ಕಾಣಹುದು.ಸಿಡ್ನಿಯಲ್ಲಿ ಸುಗಮ ಗಾನ ಸಮಾಜ, ಹೊರನಾಡ ಚಿಲುಮೆ ಕನ್ನಡದ ಮೊದಲ ಇ ಮಾಸಪತ್ರಿಕೆ,ಮೂರು ಕನ್ನಡ ವಾರಾಂತ್ಯದ ಶಾಲೆಗಳ ಆರಂಭಕ್ಕೂ ಕಾರಣರಾದವರಲ್ಲಿ ಮುಖ್ಯಸ್ಥರು.

 


ಶ್ರೀ. ಕನಕಾಪುರ ನಾರಾಯಣ ಅವರಿಂದ ಮತ್ತಷ್ಟು ಲೇಖನಗಳು


pictureವಿಚಿತ್ರ ಲೋಕ
pictureದೂರದೃಷ್ಟಿ
pictureಬೆಕ್ಕು ಬಾವುಲಿ
pictureಧರ್ಮ
pictureಗಡ್ಡ
pictureಗಾಂಪರ ಗುರು(ಹಾಸ್ಯ)
pictureಮದರ್ಸ್ ಡೇ
pictureಸುಂದರಾಂಗ !
pictureಹಗಲು - ಕನಸು (ಹಾಸ್ಯ)
pictureಮೆಟ್ಟಿಲು:(ಹಾಸ್ಯ)

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2026