ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ತೆನ್ನಾಲಿ ರಾಮ !

picture

 à²•ೃಷ್ಣದೇವರಾಯನ ಆಸ್ಥಾನಕ್ಕೊಮ್ಮೆ ಚೀನಾದೇಶದ ರಾಯಭಾರಿ ಬಂದಾಗ ಕೆಲವು ಸೇಬುಗಳನ್ನು ತಂದ.ರಾಜನಿಗೆ ಅದನ್ನು ಒಪ್ಪಿಸುವಾಗ "ಸ್ವಾಮಿ ಈ ಹಣ್ಣನ್ನು ತಿಂದವರು ಅತಿ ಹೆಚ್ಚು ಕಾಲ ಬದುಕುತ್ತಾರೆ" ಎಂದ.ಪಕ್ಕದಲೇ ಇದ್ದ ತೆನ್ನಾಲಿ ರಾಮ ಒಂದು ಹಣ್ಣನ್ನು ತೆಗೆದು ಕಡಿದೇ ಬಿಟ್ಟ.ರಾಜನಿಗೆ ಬಹಳ ಕೋಪ ಬಂದಿತು"ನನಗಾಗಿ ತಂದ ಹಣ್ಣನ್ನು ನೀನೇಕೆ ಕಡಿದೆ?ಈತನ ತಲೆಯನ್ನೇ ಕಡಿಯಿರಿ" ಎಂದು ಸೇವಕರಿಗೆ ಆಜ್ಞೆ ಮಾಡಿದ.ರಾಮಕೃಷ್ಣ "ಅರೆ ಹಣ್ಣನ್ನು ಸ್ವಲ್ಪ ಕಡಿದದ್ದಕ್ಕೇ ತಲೆ ದಂಡವೇ? ಇನ್ನು ಇಡೀ ಹಣ್ಣನ್ನು ತಿಂದವನ ಗತಿ!"ಎಂದು ಗೊಣಗಿದ.ಕೃಷ್ಣದೇವರಾಯನಿಗೆ ತನ್ನ ತಪ್ಪಿನ ಅರಿವಾಯಿತು.ಮುಗುಳ್ನಕ್ಕು ಮತ್ತೊಂದು ಸೇಬನ್ನು ತೆನ್ನಾಲಿ ರಾಮನಿಗೆ ಕೊಟ್ಟ.


 


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಕನಕಾಪುರ ನಾರಾಯಣ

ಕನ್ನಡ ಕಲಿಸುವುದು, ಕನ್ನಡ ಸಂಘಟನೆ, ಸಮಾಜ ಸೇವೆ ಮುಂದಾಳತ್ವ, ಕಥೆ, ಲೇಖನ ಬರಹಗಳು, ಸಂಘ ಸಂಸ್ಥೆ ಕಾರ್ಯಕ್ರಮ ನಿರ್ವಹಣೆ ಇವೇ ಮುಂತಾದ ಕೆಲಸ  à²¬à²¿à²¡à³à²µà²¿à²¨à²²à³à²²à²¿ ತೊಡಗಿಸಿಕೊಂಡಿದ್ದು. ಸಂಸಾರದಲ್ಲಿ ಸತಿಯ ಪ್ರೀತಿ ಮತ್ತು ಎರಡು ಮಕ್ಕಳ ತಂದೆತನದ ಜವಾಬ್ದಾರಿ.

ನೂರಾರು ಸಣ್ಣಕಥೆಗಳನ್ನು ಈ ವೆಬ್ಸೈಟ್ ನಲ್ಲಿ ಬರೆದಿರುವುದಲ್ಲದೇ, ಸ್ವಂತ ಅನುಭವ ಅಭಿಪ್ರಾಯ ವ್ಯಕ್ತಪಡಿಸಲು http://chakkemoggu.wordpress.com/ à²Žà²‚ಬ ಬ್ಲಾಗ್ ನಲ್ಲೂ ಇವರ ಲೇಖನ ಕಾಣಹುದು.ಸಿಡ್ನಿಯಲ್ಲಿ ಸುಗಮ ಗಾನ ಸಮಾಜ, ಹೊರನಾಡ ಚಿಲುಮೆ ಕನ್ನಡದ ಮೊದಲ ಇ ಮಾಸಪತ್ರಿಕೆ,ಮೂರು ಕನ್ನಡ ವಾರಾಂತ್ಯದ ಶಾಲೆಗಳ ಆರಂಭಕ್ಕೂ ಕಾರಣರಾದವರಲ್ಲಿ ಮುಖ್ಯಸ್ಥರು.

 


ಶ್ರೀ. ಕನಕಾಪುರ ನಾರಾಯಣ ಅವರಿಂದ ಮತ್ತಷ್ಟು ಲೇಖನಗಳು


pictureವಿಚಿತ್ರ ಲೋಕ
pictureದೂರದೃಷ್ಟಿ
pictureಬೆಕ್ಕು ಬಾವುಲಿ
pictureಧರ್ಮ
pictureಗಡ್ಡ
pictureಗಾಂಪರ ಗುರು(ಹಾಸ್ಯ)
pictureಮದರ್ಸ್ ಡೇ
pictureಸುಂದರಾಂಗ !
pictureಹಗಲು - ಕನಸು (ಹಾಸ್ಯ)
pictureಮೆಟ್ಟಿಲು:(ಹಾಸ್ಯ)

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2026