ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ಕರುಳ ಮಿಡಿತ

picture

ಮಧ್ಯಾಹ್ನದ ಸುಡು ಬಿಸಿಲಿನಲ್ಲಿ ರೈತನೊಬ್ಬ ತನ್ನ ಮನೆಯ ಮುಂದಿನ ಅಂಗಳದಲ್ಲಿ ಸೌದೆಯನ್ನು ಸೀಳುವ ಕೆಲಸದಲ್ಲಿ ತೊಡಗಿದ್ದ.ಕೊಡಲಿಯ ಏಟು ಮರದ ದಿಮ್ಮಿಗೆ ಪ್ರತಿಬಾರಿ ಬೀಳುವಾಗಲೂ ಅವನ ಮೈಯಲ್ಲಿ ಬೆವರು ತೊಟ್ಟಿಕ್ಕುತ್ತಿತ್ತು,ದಣಿದು ಬಾಯಾರಿದ್ದರೂ ಲೆಕ್ಕಿಸದೆ ಒಂದೇ ಸಮನೆ ದುಡಿಯುತ್ತಿದ್ದ ಮಗನನ್ನು ಕಂಡು ಅವನ ತಾಯಿ" ಮಗ ಶಾಖ ಜಾಸ್ತಿ ಅಗ್ತಿದೆ ಮನೆ ಒಳಕ್ಕೆ ಬಾ,ಆಮೇಲೆ ಸೌದೆ ಹೊಡೆದರೆ ಆಯ್ತು" ಅಂದಳು.ಆದರೆ ಅದನ್ನು ಲೆಕ್ಕಿಸದೆ ಸುಡು ಸುಡು ಬಿಸಲಿನಲ್ಲಿ ತನ್ನ ಕೆಲಸ ಮುಂದುವರೆಸಿದ ಮಗ ಪದೇ ಪದೇ ತಾಯಿಯ ಕೂಗನ್ನು ಕೇಳಿ ತಾಳ್ಮೆ ಕಳೆದು ಒಮ್ಮೆ ರೇಗಿದ"ಏ ನೀನು ಒಳಕ್ಕೆ ಹೋಗಮ್ಮಾ,ಹೋಗಿ ಬೇರೆ ಕೆಲಸ ನೋಡು"ಎಂದು ಬೈದ.ಒಳಕ್ಕೆಹೋದ ತಾಯಿ ವರುಶವೂ ತುಂಬದ ತನ್ನ ಮೊಮ್ಮಗನನ್ನು ಎತ್ತು ತಂದು ಸುಡುಬಿಸಿಲಿನಲ್ಲಿ ಮಲಗಿಸಿದಳು.ಇದನ್ನು ಕಂಡು ಮಗನಿಗೆ ಬಹಳ ಕೋಪ ಬಂದಿತು"ನಿಂಗೇನ್ ಬುದ್ಧಿಗಿದ್ಧಿ ಇದ್ದೀಯಾ? ಅಲ್ಲಾ ಮಗೂನ ಬಿಸಿಲಿನಲ್ಲಿ ಮಲಗಿಸಿದ್ದೀಯಲ್ಲಾ ಮೈ ಸುಡಲ್ವಾ?" ಎಂದು ಗದರಿದ.ಅದಕ್ಕೆ ತಾಯಿ "ಸುಟ್ಟರೆ ನಿಂಗೇನಾಗುತ್ತೆ?" ಎಂದು ಪ್ರಶ್ನಿಸಿದಳು.ಅದಕ್ಕೆ ಆ ರೈತ "ಅದು ನನ್ನ ಮಗು, ಕರಳು ಚುಳ್ ಅನ್ನಲ್ವಾ" ಎಂದ.ತಕ್ಷಣ ತಾಯಿ "ನೀನು ಬಿಸಿಲಿನಲ್ಲಿ ಸುಡ್ತಾ ಇದ್ದರೆ ನನ್ನ ಕರಳು ಏನು ಆಗಬೇಕು?" ಎಂದಳು.ಕೂಡಲೇ ತಾಯಿಯ ಮಮತೆ ಅರಿತು ಮನೆಯೊಳಕ್ಕೆ ಹೊರಟ ಮಗ.


 


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಕನಕಾಪುರ ನಾರಾಯಣ

ಕನ್ನಡ ಕಲಿಸುವುದು, ಕನ್ನಡ ಸಂಘಟನೆ, ಸಮಾಜ ಸೇವೆ ಮುಂದಾಳತ್ವ, ಕಥೆ, ಲೇಖನ ಬರಹಗಳು, ಸಂಘ ಸಂಸ್ಥೆ ಕಾರ್ಯಕ್ರಮ ನಿರ್ವಹಣೆ ಇವೇ ಮುಂತಾದ ಕೆಲಸ  ಬಿಡುವಿನಲ್ಲಿ ತೊಡಗಿಸಿಕೊಂಡಿದ್ದು. ಸಂಸಾರದಲ್ಲಿ ಸತಿಯ ಪ್ರೀತಿ ಮತ್ತು ಎರಡು ಮಕ್ಕಳ ತಂದೆತನದ ಜವಾಬ್ದಾರಿ.

ನೂರಾರು ಸಣ್ಣಕಥೆಗಳನ್ನು ಈ ವೆಬ್ಸೈಟ್ ನಲ್ಲಿ ಬರೆದಿರುವುದಲ್ಲದೇ, ಸ್ವಂತ ಅನುಭವ ಅಭಿಪ್ರಾಯ ವ್ಯಕ್ತಪಡಿಸಲು http://chakkemoggu.wordpress.com/ ಎಂಬ ಬ್ಲಾಗ್ ನಲ್ಲೂ ಇವರ ಲೇಖನ ಕಾಣಹುದು.ಸಿಡ್ನಿಯಲ್ಲಿ ಸುಗಮ ಗಾನ ಸಮಾಜ, ಹೊರನಾಡ ಚಿಲುಮೆ ಕನ್ನಡದ ಮೊದಲ ಇ ಮಾಸಪತ್ರಿಕೆ,ಮೂರು ಕನ್ನಡ ವಾರಾಂತ್ಯದ ಶಾಲೆಗಳ ಆರಂಭಕ್ಕೂ ಕಾರಣರಾದವರಲ್ಲಿ ಮುಖ್ಯಸ್ಥರು.

 


ಶ್ರೀ. ಕನಕಾಪುರ ನಾರಾಯಣ ಅವರಿಂದ ಮತ್ತಷ್ಟು ಲೇಖನಗಳು


pictureವಿಚಿತ್ರ ಲೋಕ
pictureದೂರದೃಷ್ಟಿ
pictureಬೆಕ್ಕು ಬಾವುಲಿ
pictureಧರ್ಮ
pictureಗಡ್ಡ
pictureಗಾಂಪರ ಗುರು(ಹಾಸ್ಯ)
pictureಮದರ್ಸ್ ಡೇ
pictureಸುಂದರಾಂಗ !
pictureಹಗಲು - ಕನಸು (ಹಾಸ್ಯ)
pictureಮೆಟ್ಟಿಲು:(ಹಾಸ್ಯ)

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2023