ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ತಂದೆಯ ಶ್ರಮ

picture

ತಂದೆಯೊಬ್ಬನು ತನ್ನ ಸಂಸಾರ ಸಾಗಿಸಲು ದಿನವಿಡೀ ರೊಟ್ಟಿಯನ್ನು ಮಾರುತ್ತಿದ್ದ, ಸಂಜೆಯ ವೇಳೆ ಉಳಿದ ಸಮಯದಲ್ಲಿ ವೃತ್ತಿ ಶಿಕ್ಷಣವನ್ನೂ ಮಾಡುತ್ತಿದ್ದ.ಮನೆಯ ಮಡದಿ ಮಕ್ಕಳ ಜೊತೆ ಕಾಲ ಕಳೆಯಲು ಸಾಧ್ಯವೇ ಇರುತ್ತಿರಲಿಲ್ಲ.ವರುಷಗಳು ಕಳೆದವು, ಶಿಕ್ಷಣ ಮುಗಿಯಿತು, ಒಳ್ಳೆಯ ಅಂಕಗಳನ್ನು ಪಡೆದು ಉತ್ತೀರ್ಣನೂ ಆದ.ಸರಿ ಅದಕ್ಕೆ ತಕ್ಕ ಪ್ರತಿಫಲದಂತೆ ಒಳ್ಳೆಯ ಕೆಲಸವೂ ದಕ್ಕಿತು.ಕೆಲಸದಲ್ಲಿ ಒಳ್ಳೆಯ ಹೆಸರು, ಹಣ ಸಂಪಾದಿಸತೊಡಗಿದ.ಉತ್ತಮ ಅಧಿಕಾರಿಯಾಗುವ ಸಂಭವ ಇದ್ದುದರಿಂದ ಇನ್ನೂ ಹೆಚ್ಚು ಹೆಚ್ಚು ಓದಲು ಮನಸ್ಸು ಮಾಡಿದ.ಇದರಿಂದ ಮನೆಯವರೊಡನೆ ಕಾಲ ಕಳೆಯುವುದನ್ನೇ ಮರೆತ.ಅಧಿಕಾರಿಯೂ ಆದ,ಕಂಪನಿಯ ಮಾಲೀಕನೂ ಆದ ದೊಡ್ಡ ಬಂಗಲೆ ಕಾರುಗಳು ಕೈಕಾಲಿಗೆಲ್ಲಾ ಆಳುಗಳು.
ಒಮ್ಮೆ ಮನೆಗೆ ಬಂದು ಹೆಂಡತಿ ಮಕ್ಕಳನ್ನು ಕರೆದು ಹೇಳಿದ ಇನ್ನು ದುಡಿದದ್ದು ಸಾಕಾಯ್ತು ಮುಂದೆ ಮನೆಯವರ ಜೊತೆ ನೆಮ್ಮದಿಯಿಂದ ಇರುವೆ ಎಂದ.ಮಡದಿ ಮಕ್ಕಳಿಗೆ ಹೇಳತೀರದಷ್ಟು ಸಂತೋಷವಾಯಿತು.ಆದಿನ ಆನಂದಿಂದ ಔತಣವನ್ನೇ ಏರ್ಪಡಿಸಿದರು .ನಾಳೆಯಿಂದ ನಮ್ಮವರೆಲ್ಲಾ ಒಟ್ಟಿಗೆ ಇರುವ ಸಂಭ್ರಮದ ಕನಸು ಕಂಡರು,ಕುಡಿದರು,ಕುಣಿದರು, ರಾತ್ರಿ ಕಣ್ತುಂಬ ನಿದ್ರೆ ಮಾಡಿದರು.ಎಲ್ಲರೂ ಬೆಳಿಗ್ಗೆ ಬೇಗನೆ ಎದ್ದು ತಂದೆಯ ಜೊತೆ ಸಂತೋಷದಿ ಕಳೆಯುವ ದಿನಗಳ ನನಸನ್ನು ನಾಂದಿಯಾಡುವ ಭರದಲ್ಲಿ ಇದ್ದರು.ಆದರೆ ತಂದೆ ರಾತ್ರಿ ಮಲಗಿದವನು ಬೆಳಿಗ್ಗೆ ಏಳಲೇ ಇಲ್ಲ. ಹೃದಯ ಅಘಾತದಿಂದ ಯಾವಾಗ ಅವನ ಪ್ರಾಣ ಹಾರಿತ್ತೋ ಯಾರಿಗೂ ತಿಳಿಯದಾಗಿತ್ತು.
ನೀತಿ: ಮಡದಿ, ಮಕ್ಕಳ ಜೊತೆ ಕಾಲ ಕಳೆಯುವುದು ಸಂಸಾರಿಯ ಮೊದಲ ಧರ್ಮ

 


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಕನಕಾಪುರ ನಾರಾಯಣ

ಕನ್ನಡ ಕಲಿಸುವುದು, ಕನ್ನಡ ಸಂಘಟನೆ, ಸಮಾಜ ಸೇವೆ ಮುಂದಾಳತ್ವ, ಕಥೆ, ಲೇಖನ ಬರಹಗಳು, ಸಂಘ ಸಂಸ್ಥೆ ಕಾರ್ಯಕ್ರಮ ನಿರ್ವಹಣೆ ಇವೇ ಮುಂತಾದ ಕೆಲಸ  à²¬à²¿à²¡à³à²µà²¿à²¨à²²à³à²²à²¿ ತೊಡಗಿಸಿಕೊಂಡಿದ್ದು. ಸಂಸಾರದಲ್ಲಿ ಸತಿಯ ಪ್ರೀತಿ ಮತ್ತು ಎರಡು ಮಕ್ಕಳ ತಂದೆತನದ ಜವಾಬ್ದಾರಿ.

ನೂರಾರು ಸಣ್ಣಕಥೆಗಳನ್ನು ಈ ವೆಬ್ಸೈಟ್ ನಲ್ಲಿ ಬರೆದಿರುವುದಲ್ಲದೇ, ಸ್ವಂತ ಅನುಭವ ಅಭಿಪ್ರಾಯ ವ್ಯಕ್ತಪಡಿಸಲು http://chakkemoggu.wordpress.com/ à²Žà²‚ಬ ಬ್ಲಾಗ್ ನಲ್ಲೂ ಇವರ ಲೇಖನ ಕಾಣಹುದು.ಸಿಡ್ನಿಯಲ್ಲಿ ಸುಗಮ ಗಾನ ಸಮಾಜ, ಹೊರನಾಡ ಚಿಲುಮೆ ಕನ್ನಡದ ಮೊದಲ ಇ ಮಾಸಪತ್ರಿಕೆ,ಮೂರು ಕನ್ನಡ ವಾರಾಂತ್ಯದ ಶಾಲೆಗಳ ಆರಂಭಕ್ಕೂ ಕಾರಣರಾದವರಲ್ಲಿ ಮುಖ್ಯಸ್ಥರು.

 


ಶ್ರೀ. ಕನಕಾಪುರ ನಾರಾಯಣ ಅವರಿಂದ ಮತ್ತಷ್ಟು ಲೇಖನಗಳು


pictureವಿಚಿತ್ರ ಲೋಕ
pictureದೂರದೃಷ್ಟಿ
pictureಬೆಕ್ಕು ಬಾವುಲಿ
pictureಧರ್ಮ
pictureಗಡ್ಡ
pictureಗಾಂಪರ ಗುರು(ಹಾಸ್ಯ)
pictureಮದರ್ಸ್ ಡೇ
pictureಸುಂದರಾಂಗ !
pictureಹಗಲು - ಕನಸು (ಹಾಸ್ಯ)
pictureಮೆಟ್ಟಿಲು:(ಹಾಸ್ಯ)

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2025