ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ಜಾಡಿ

picture

ಫಿಲಾಸಫಿ ಪ್ರೊಫೆಸರ್ ಒಬ್ಬ ತನ್ನ ತರಗತಿಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ,ತನ್ನ ಬಳಿಯಿದ್ದ ಗಾಜಿನ ಜಾಡಿಯಲ್ಲಿ ದಪ್ಪ ಹಾಗೂ ನುಣುಪಾದ ನದಿಯಲ್ಲಿ ಸಿಗುವ ಕಲ್ಲುಗಳನ್ನು ತುಂಬಿದ."ಮಕ್ಕಳೇ, ಈಗ ನೋಡಿ ಜಾಡಿ ತುಂಬಿದೆಯಲ್ಲವೇ?" ಮಕ್ಕಳು ಹೂ ಎಂದು ತಲೆ ಆಡಿಸಿದರು.
ನಂತರ ಕಡಲೆ ಗಾತ್ರದ ಸಣ್ಣ ಸಣ್ಣ ಕಲ್ಲುಗಳನ್ನು ಅದೇ ಜಾಡಿಗೆ ಸುರಿದ,ಜಾಡಿ ಅಲ್ಲಾಡಿಸಲು ಸಣ್ಣ ಕಲ್ಲುಗಳು ದೊಡ್ಡಕಲ್ಲುಗಳ ಸಂಧಿಯಲ್ಲಿ ನುಸುಳಿದವು."ಮಕ್ಕಳೇ, ಈಗ ನೋಡಿ ಜಾಡಿ ತುಂಬಿದೆಯಲ್ಲವೇ?"ಅಂದ.ಮಕ್ಕಳು ಒಪ್ಪಿದರು.
ನಂತರ ಪ್ರೊಫೆಸರ್ ಒಂದು ಚೀಲದಲ್ಲಿ ಇದ್ದ ಮರಳನ್ನು ಆ ಜಾಡಿಗೆ ಸುರಿದನು.ಮರಳು ಕಲ್ಲುಗಳ ಸಂದುಗೊಂದುಗಳನ್ನು ಹೊಕ್ಕು ಜಾಡಿ ಭರ್ತಿಯಾಯಿತು.ಮತ್ತದೇ ಪ್ರಶ್ನೆ "ಈಗ ನೋಡಿ ಜಾಡಿ ತುಂಬಿದೆಯಲ್ಲವೇ?" ಮಕ್ಕಳು "ಹೂ ಹೌದು" ಎಂದರು.
ಆಗ ಪ್ರೊಫೆಸರ್ ಹೇಳಿದ "ಮಕ್ಕಳೇ ಗಮನವಿಟ್ಟು ಕೇಳಿ ಈ ಜಾಡಿಯೇ ನಿಮ್ಮ ಜೀವನ ಅಂದುಕೊಳ್ಳಿ, ಕಲ್ಲುಗಳೇ ಬಹು ಮುಖ್ಯವಾದ ಸಂಸಾರ,ಸಂಗಾತಿ,ಆರೋಗ್ಯ,ಮಕ್ಕಳು ಇದ್ದಹಾಗೆ.ನೀವು ಎಲ್ಲಾ ಕಳೆದುಕೊಂಡರೂ ಇವರು ನಿಮ್ಮೊಡನೇ ಇರುತ್ತಾರೆ ಆಗಲೂ ನಿಮ್ಮ ಜೀವನ(ಜಾಡಿ)ಪೂರ್ತಿಯಾಗೇ ಇರುತ್ತದೆ.ಇನ್ನು ಸಣ್ಣ ಕಲ್ಲುಗಳು ನಿಮ್ಮ ಭೋಗ-ಭಾಗ್ಯಗಳು, ಆಸ್ತಿ-ಅಂತಸ್ತುಗಳು,ಇನ್ನು ಮರಳು ಅತಿ ಸಣ್ಣ ವಿಷಯ/ವಸ್ತುಗಳು.ನೀವು ಮರಳನ್ನೇ ಜಾಡಿಗೆ ತುಂಬಿಕೊಂಡರೆ ಬೇರೆ ಯಾವುದಕ್ಕೂ ಸ್ಥಳವೇ ಇಲ್ಲದಂತಾಗುತ್ತದೆ" ಎಂದ.

 


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಕನಕಾಪುರ ನಾರಾಯಣ

ಕನ್ನಡ ಕಲಿಸುವುದು, ಕನ್ನಡ ಸಂಘಟನೆ, ಸಮಾಜ ಸೇವೆ ಮುಂದಾಳತ್ವ, ಕಥೆ, ಲೇಖನ ಬರಹಗಳು, ಸಂಘ ಸಂಸ್ಥೆ ಕಾರ್ಯಕ್ರಮ ನಿರ್ವಹಣೆ ಇವೇ ಮುಂತಾದ ಕೆಲಸ  ಬಿಡುವಿನಲ್ಲಿ ತೊಡಗಿಸಿಕೊಂಡಿದ್ದು. ಸಂಸಾರದಲ್ಲಿ ಸತಿಯ ಪ್ರೀತಿ ಮತ್ತು ಎರಡು ಮಕ್ಕಳ ತಂದೆತನದ ಜವಾಬ್ದಾರಿ.

ನೂರಾರು ಸಣ್ಣಕಥೆಗಳನ್ನು ಈ ವೆಬ್ಸೈಟ್ ನಲ್ಲಿ ಬರೆದಿರುವುದಲ್ಲದೇ, ಸ್ವಂತ ಅನುಭವ ಅಭಿಪ್ರಾಯ ವ್ಯಕ್ತಪಡಿಸಲು http://chakkemoggu.wordpress.com/ ಎಂಬ ಬ್ಲಾಗ್ ನಲ್ಲೂ ಇವರ ಲೇಖನ ಕಾಣಹುದು.ಸಿಡ್ನಿಯಲ್ಲಿ ಸುಗಮ ಗಾನ ಸಮಾಜ, ಹೊರನಾಡ ಚಿಲುಮೆ ಕನ್ನಡದ ಮೊದಲ ಇ ಮಾಸಪತ್ರಿಕೆ,ಮೂರು ಕನ್ನಡ ವಾರಾಂತ್ಯದ ಶಾಲೆಗಳ ಆರಂಭಕ್ಕೂ ಕಾರಣರಾದವರಲ್ಲಿ ಮುಖ್ಯಸ್ಥರು.

 


ಶ್ರೀ. ಕನಕಾಪುರ ನಾರಾಯಣ ಅವರಿಂದ ಮತ್ತಷ್ಟು ಲೇಖನಗಳು


pictureವಿಚಿತ್ರ ಲೋಕ
pictureದೂರದೃಷ್ಟಿ
pictureಬೆಕ್ಕು ಬಾವುಲಿ
pictureಧರ್ಮ
pictureಗಡ್ಡ
pictureಗಾಂಪರ ಗುರು(ಹಾಸ್ಯ)
pictureಮದರ್ಸ್ ಡೇ
pictureಸುಂದರಾಂಗ !
pictureಹಗಲು - ಕನಸು (ಹಾಸ್ಯ)
pictureಮೆಟ್ಟಿಲು:(ಹಾಸ್ಯ)

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2023