ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ಅಹಂ

picture

 ಇಬ್ಬರು ಬಾಲ್ಯ ಸ್ನೇಹಿತರು ಇದ್ದರು.ಬೆಳೆದು ದೊಡ್ಡವರಾದ ಮೇಲೆ ಒಬ್ಬನು ಮಹಾ ತಪಸ್ವಿಯೂ ಮತ್ತೊಬ್ಬನು ಬಹಳ ಸಿರಿವಂತನಾಗಿ ರಾಜನಾದನು.ತಪಸ್ವಿಯು ಊರ ಹೊರಗಿನ ಬೆಟ್ಟಗುಡ್ಡಗಳಲ್ಲಿ ವಾಸವಾಗಿದ್ದನು.ಒಮ್ಮೆ ರಾಜನಾದವನು ತನ್ನ ಗೆಳೆಯನನ್ನು ನೋಡಲು ಬಯಸಿ ಅವನಿಗಾಗಿ ಹುಡುಕಾಡಿ,ಕಾಡು ಮೇಡು ಅಲೆದು ಕಡೆಗೂ ಆತನನ್ನು ಕಂಡು ತನ್ನ ಗೆಳೆಯನು ಮಹಾ ಜ್ಞಾನಿಯಾಗಿರುವುದನ್ನು ಕಂಡು ಸಂತೋಷದಿಂದ ತನ್ನ ಮನೆಗೆ ಔತಣಕ್ಕೆ ಆಹ್ವಾನವಿತ್ತನು.ಔತಣಕ್ಕೆ ಗೆಳೆಯ ಬರುವದಿನವನ್ನೇ ಕಾದಿದ್ದು ಭಾರೀ ವಿಜೃಂಭಣೆಯ ಅಲಂಕಾರಗಳೊಂದಿಗೆ ಬರಮಾಡಿಕೊಳ್ಳಲು ಸಜಾಗಿದ್ದನು.ಅರಮನೆಯ ಮುಂದೆ ಕೆಂಪಾದ ಕಂಬಳಿ ಹಾಸಿತ್ತು.ತಪಸ್ವಿ ಗೆಳೆಯ ಅರಮನೆಯ ಹೆಬ್ಬಾಗಿಲ ಮುಂದೆ ಬಂದನು. ಅಲ್ಲೊಬ್ಬ ಕಾವಲುಗಾರ ತಪಸ್ವಿಯನ್ನು ನೋಡಿ"ಅಯ್ಯಾ ನೋಡಿದೆಯಾ ನಿನ್ನ ಗೆಳೆಯನ ಶ್ರೀಮಂತಿಕೆಯನ್ನ,ನಿನ್ನಲ್ಲಿ ಏನೂ ಇಲ್ಲ ಎಂದು ನಿನಗೆ ತೋರಿಸಲೆಂದೇ ಹೀಗೆ ಮಾಡಿದ್ದಾನೆ"ಎಂದ,ತಪಸ್ವಿಗೆ ತಾಳ್ಮೆ ಕರಗಿತು ಸ್ವಲ್ಪದೂರಕ್ಕೆ ಓಡಿಹೋಗಿ ಮಣ್ಣಿನ ರಾಡಿ(ಕೊಚ್ಚೆ)ಯಲ್ಲು ತನ್ನ ಕಾಲನ್ನು ಅದ್ದಿ ಆ ಕಂಬಳಿಯಮೇಲೆಲ್ಲಾ ಕೊಳೆ ಮಾಡಿ ಒಳಗೆ ನಡೆದ,ಅಷ್ಟರಲ್ಲಿ ಅಲ್ಲಿಗೆ ಬಂದ ರಾಜನು "ಯಾರಲ್ಲಿ? ಯಾರು ಈ ಸೊಗಸಾದ ಕಂಬಳಿಯನ್ನು ಹೀಗೆ ಮಾಡಿದ್ದು?" ಎಂದು ಕೂಗಿದ.ಅದಕ್ಕೆ ಆತನ ಗೆಳೆಯ ತಪಸ್ವಿಯು "ನಾನೇ ಗೆಳೆಯ ಹಾಗೆ ಮಾಡಿದ್ದು, ನಿನ್ನ ಸಿರಿವಂತಿಕೆಯ ಅಮಲನ್ನು ಮುರಿಯಲು ಹಾಗೆ ಮಾಡಿದೆ,ನಿನ್ನ ಶ್ರಿಮಂತಿಕೆಯನ್ನು ತೋರಿಸಲು ಹೀಗೆ ಅಲಂಕಾರಗಳನ್ನು ಮಾಡಿದ್ದೀಯಾ?"ಎಂದನು. ಅದಕ್ಕೆ ರಾಜನು "ಅಯ್ಯಾ ಗೆಳೆಯ ನಾನೇನೋ ನೀನು ಜೀವನದಲ್ಲಿ ಎಲ್ಲವನ್ನೂ ತ್ಯಜಿಸಿದ ವೈರಾಗಿ, ತಪಸ್ವಿ, ಮಹಾ ಜ್ಞಾನಿ ಎಂದುಕೊಂಡಿದ್ದೆ ಆದರೆ ಈ ಅಹಂ ಎನ್ನುವುದು  ನಿನಗೆ ಇನ್ನೂ ಅಂಟಿಕೊಂಡಿದೆ. ಈಗ ನನಗೂ ನಿನಗೂ ಏನೂ ಅಂತರವೇ ಇಲ್ಲ. ನನಗೆ ಹಣದ ಅಹಂ ಇದ್ದರೆ ನಿನಗೆ ಗುಣದ ಅಹಂ ಇದೆ."ಎಂದು ಬೇಸರದಿಂದ ನುಡಿದ.
ನೀತಿ: ಹಣವಾಗಲಿ, ಗುಣವಾಗಲಿ ಎಲ್ಲವೂ ಆಭಗವಂತನಿಂದಲೇ ಪ್ರಾಪ್ತಿಯಾದವುಗಳು,ಆಕಸ್ಮಾತ್ ಅಪಘಾತಕ್ಕೆ ಒಳಗಾಗಿ ಪ್ರಾಣ ಬಿಟ್ಟರೆ ಯಾವುದೂ ನಮ್ಮಜೊತೆ ಬರಲಾರವು.ಇದ್ದಷ್ಟು ಕಾಲ ಇತರರಿಗೆ ಒಳಿತು ಮಾಡಿದಲ್ಲಿ ಮುಂದೆ ಇದೇ ಜನ್ಮದಲ್ಲೇ ಅದರ ಪ್ರತಿಫಲ ಸಿಗಿವುದು ಖಚಿತ.

 


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಕನಕಾಪುರ ನಾರಾಯಣ

ಕನ್ನಡ ಕಲಿಸುವುದು, ಕನ್ನಡ ಸಂಘಟನೆ, ಸಮಾಜ ಸೇವೆ ಮುಂದಾಳತ್ವ, ಕಥೆ, ಲೇಖನ ಬರಹಗಳು, ಸಂಘ ಸಂಸ್ಥೆ ಕಾರ್ಯಕ್ರಮ ನಿರ್ವಹಣೆ ಇವೇ ಮುಂತಾದ ಕೆಲಸ  ಬಿಡುವಿನಲ್ಲಿ ತೊಡಗಿಸಿಕೊಂಡಿದ್ದು. ಸಂಸಾರದಲ್ಲಿ ಸತಿಯ ಪ್ರೀತಿ ಮತ್ತು ಎರಡು ಮಕ್ಕಳ ತಂದೆತನದ ಜವಾಬ್ದಾರಿ.

ನೂರಾರು ಸಣ್ಣಕಥೆಗಳನ್ನು ಈ ವೆಬ್ಸೈಟ್ ನಲ್ಲಿ ಬರೆದಿರುವುದಲ್ಲದೇ, ಸ್ವಂತ ಅನುಭವ ಅಭಿಪ್ರಾಯ ವ್ಯಕ್ತಪಡಿಸಲು http://chakkemoggu.wordpress.com/ ಎಂಬ ಬ್ಲಾಗ್ ನಲ್ಲೂ ಇವರ ಲೇಖನ ಕಾಣಹುದು.ಸಿಡ್ನಿಯಲ್ಲಿ ಸುಗಮ ಗಾನ ಸಮಾಜ, ಹೊರನಾಡ ಚಿಲುಮೆ ಕನ್ನಡದ ಮೊದಲ ಇ ಮಾಸಪತ್ರಿಕೆ,ಮೂರು ಕನ್ನಡ ವಾರಾಂತ್ಯದ ಶಾಲೆಗಳ ಆರಂಭಕ್ಕೂ ಕಾರಣರಾದವರಲ್ಲಿ ಮುಖ್ಯಸ್ಥರು.

 


ಶ್ರೀ. ಕನಕಾಪುರ ನಾರಾಯಣ ಅವರಿಂದ ಮತ್ತಷ್ಟು ಲೇಖನಗಳು


pictureವಿಚಿತ್ರ ಲೋಕ
pictureದೂರದೃಷ್ಟಿ
pictureಬೆಕ್ಕು ಬಾವುಲಿ
pictureಧರ್ಮ
pictureಗಡ್ಡ
pictureಗಾಂಪರ ಗುರು(ಹಾಸ್ಯ)
pictureಮದರ್ಸ್ ಡೇ
pictureಸುಂದರಾಂಗ !
pictureಹಗಲು - ಕನಸು (ಹಾಸ್ಯ)
pictureಮೆಟ್ಟಿಲು:(ಹಾಸ್ಯ)

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2023