ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ಯಾರು ಮೊದಲು

picture

ಮನೆಯೊಡತಿ ಬಾಗಿಲು ತೆರೆದು ಹೊರಗೆ ಬರಲು ಅಂಗಳದಲ್ಲಿ ಬಿಳಿಕೂದಲು ಬೆಳೆಸಿಕೊಂಡಿದ್ದ 3 ಬಡ ಮುದುಕರು ಕುಳಿತಿದ್ದರು.ಅವರನ್ನು ಕಂಡು ಮರುಕದಿಂದ "ತಾವು ಯಾರೋ ನನಗೆ ತಿಳಿಯದು,ಹಸಿದಂತೆ ಕಾಣುತ್ತೀರಿ,ಒಳಗೆ ಬನ್ನಿ ತಿನ್ನಲು ಏನಾದರು ಕೊಡುವೆ ಎಂದಳು.ಅದಕ್ಕೆ ಅವರಲ್ಲೊಬ್ಬನು "ನಿಮ್ಮ ಮನೆಯ ಯಜಮನ ಮನೆಯಲ್ಲಿರುವನೋ?ಆತನನ್ನು ಕೇಳು ನಂತರ ಬರುವೆವು"ಎಂದ.ಮನೆಯ ಯಜಮಾನ ಇಲ್ಲವೆಂದು ಕೇಳಿ, ಆತನು ಬಂದಮೇಲೆ ಒಳಕ್ಕೆ ಬರುತ್ತೇವೆ ಎಂದರು.ಯಜಮಾನ ಬಂದಾಗ ಅವರನ್ನು ಕಂಡು, ಹೆಂಡತಿಯನ್ನು ವಿಚಾರಿಸಿ ವಿವರವಾಗಿ ವಿಷಯವೇನೆಂದು ತಿಳಿದ,ಒಳಗೆ ಕರೆಯಲು ಒಪ್ಪಿಗೆ ಕೊಟ್ಟ.ಆದರೆ ಆ ಮೂವರೂ ಒಟ್ಟಿಗೆ ಒಳಗೆ ಬರಲು ಸಿದ್ಧವಿರಲಿಲ್ಲ.ಅವರಲ್ಲಿ ಒಬ್ಬ "ನನ್ನ ಹೆಸರು ಸಂಪತ್ತು, ಈತನ ಹೆಸರು ಯಸಸ್ಸು, ಆತನ ಹೆಸರು ಪ್ರೀತಿ" ಎಂದು ಹೇಳಿದ."ನಮ್ಮಲ್ಲಿ ಯಾವನೋ ಒಬ್ಬನನ್ನು ಮಾತ್ರ ಒಳಗೆ ಕರೆಯಬಹುದು.ನೀವು ಯಾರನ್ನು ಆರಿಸುವಿರೋ ಯೋಚಿಸಿ ಬನ್ನಿ" ಎಂದ.ಒಳಗೆ ಹೊರಟ ಯಜಮಾನಿ ಗಂಡನ ಜೊತೆ ತುಸುಹೊತ್ತು ವಿಚಾರಣೆ ಮಾಡಿ "ಪ್ರೀತಿಯನ್ನು ಒಳಗೆ ಕರೆದರು.ಆಗ ಉಳಿದ ಇನ್ನಿಬ್ಬರೂ ಅವನ ಜೊತೆ ಒಳಗೆ ಬಂದರು.ಬೇರೆ ಆಯ್ಕೆ ಮಾಡಿದ್ದರೆ ಏನಾಗುತ್ತಿತ್ತೆಂದು ನೀವೇ ಯೋಚಿಸಿ....


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಕನಕಾಪುರ ನಾರಾಯಣ

ಕನ್ನಡ ಕಲಿಸುವುದು, ಕನ್ನಡ ಸಂಘಟನೆ, ಸಮಾಜ ಸೇವೆ ಮುಂದಾಳತ್ವ, ಕಥೆ, ಲೇಖನ ಬರಹಗಳು, ಸಂಘ ಸಂಸ್ಥೆ ಕಾರ್ಯಕ್ರಮ ನಿರ್ವಹಣೆ ಇವೇ ಮುಂತಾದ ಕೆಲಸ  à²¬à²¿à²¡à³à²µà²¿à²¨à²²à³à²²à²¿ ತೊಡಗಿಸಿಕೊಂಡಿದ್ದು. ಸಂಸಾರದಲ್ಲಿ ಸತಿಯ ಪ್ರೀತಿ ಮತ್ತು ಎರಡು ಮಕ್ಕಳ ತಂದೆತನದ ಜವಾಬ್ದಾರಿ.

ನೂರಾರು ಸಣ್ಣಕಥೆಗಳನ್ನು ಈ ವೆಬ್ಸೈಟ್ ನಲ್ಲಿ ಬರೆದಿರುವುದಲ್ಲದೇ, ಸ್ವಂತ ಅನುಭವ ಅಭಿಪ್ರಾಯ ವ್ಯಕ್ತಪಡಿಸಲು http://chakkemoggu.wordpress.com/ à²Žà²‚ಬ ಬ್ಲಾಗ್ ನಲ್ಲೂ ಇವರ ಲೇಖನ ಕಾಣಹುದು.ಸಿಡ್ನಿಯಲ್ಲಿ ಸುಗಮ ಗಾನ ಸಮಾಜ, ಹೊರನಾಡ ಚಿಲುಮೆ ಕನ್ನಡದ ಮೊದಲ ಇ ಮಾಸಪತ್ರಿಕೆ,ಮೂರು ಕನ್ನಡ ವಾರಾಂತ್ಯದ ಶಾಲೆಗಳ ಆರಂಭಕ್ಕೂ ಕಾರಣರಾದವರಲ್ಲಿ ಮುಖ್ಯಸ್ಥರು.

 


ಶ್ರೀ. ಕನಕಾಪುರ ನಾರಾಯಣ ಅವರಿಂದ ಮತ್ತಷ್ಟು ಲೇಖನಗಳು


pictureವಿಚಿತ್ರ ಲೋಕ
pictureದೂರದೃಷ್ಟಿ
pictureಬೆಕ್ಕು ಬಾವುಲಿ
pictureಧರ್ಮ
pictureಗಡ್ಡ
pictureಗಾಂಪರ ಗುರು(ಹಾಸ್ಯ)
pictureಮದರ್ಸ್ ಡೇ
pictureಸುಂದರಾಂಗ !
pictureಹಗಲು - ಕನಸು (ಹಾಸ್ಯ)
pictureಮೆಟ್ಟಿಲು:(ಹಾಸ್ಯ)

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2026