ಧರ್ಮ

ಋಷಿಯೊಬ್ಬನೆ ತಪಸ್ಸಿಗೆ ಕುಳಿತಿರಲು ಪಕ್ಷಿಯೊಂದು ಅವನ ತಲೆಯ ಮೇಲೆ ಗಲೀಜು ಮಾಡಿತು,ಕೋಪದಿಂದ ಆ ಪಕ್ಷಿಗೆ ಶಪಿಸಿ ಕೇವಲ ನೋಟದಿಂದಲೇ ಅದನ್ನು ಭಸ್ಮ ಮಾಡಿದ.ಆದಿನ ದೂರ ಪ್ರಯಾಣ ಹೊರಟಿದ್ದ ಋಷಿಯು ಕಮಂಡಲದಲ್ಲಿ ನೀರು ಮತ್ತು ಸ್ವಲ್ಪ ಆಹಾರ ಭಿಕ್ಷೆಗಾಗಿ ಒಂದು ಮನೆಯ ಮುಂದೆ ಬಂದು ನಿಂತು "ಭವತಿ ಭಿಕ್ಷಾಂದೇಹಿ"ಎಂದು ಕೂಗಿದ.ಆ ಮನೆಯಾಕೆ ಬಹಳ ತಡಮಾಡಿ ಹೊರಗೆ ಬಂದಳು,ಕುಪಿತ ಋಷಿಯನ್ನು ಕುರಿತು"ಋಷಿವರ್ಯಾ ಸ್ವಲ್ಪ ತಾಳು ನನ್ನನು ಪಕ್ಷಿಯಂತೆ ಸುಡಬೇಡ, ಈ ಮನೆಯ ಗೃಹಿಣಿಯಾದ ನಾನು ಮೊದಲು ನನ್ನ ಮನೆವರ ಕೆಲಸ ಮಾಡುವುದು ನನ್ನ ಧರ್ಮ" ಎಂದಳು,,ಋಷಿಗೆ ತನ್ನ ತಪ್ಪಿನರಿವಾಯಿತು.ಧರ್ಮವನ್ನು ತಾನೂ ಪಾಲಿಸಬೇಕೆಂದು ಆಕೆಯನ್ನು "ನಾನೂ ಧರ್ಮದ ಪಾಠವನ್ನು ಕಲಿಯಬೇಕಿದೆ"ಎಂದ ಅದಕ್ಕವಳು ಧರ್ಮವ್ಯಾದನನ್ನು ಕಾಣಲು ಸೂಚಿಸಿದಳು.ಧರ್ಮವ್ಯಾದ ಮಾಂಸದ ವ್ಯಾಪಾರಿ,ಋಷಿ ಆತನ ಬಳಿ ಹೋಗಲು ಆತ ತನ್ನೆಲ್ಲಾ ಗಿರಾಕಿ ಹೋಗುವವರೆಗೂ ಕಾಯಿಸಿದ,ನಂತರ ತನ್ನ ತಂದೆ ತಾಯಿಯರನ್ನು ವಿಚಾರಿಸಿ ನಂತರ ಋಷಿಯನ್ನು ಬಂದ ವಿಚಾರವಾಗಿ ಕೇಳಿದ,ಅಷ್ಟರಲ್ಲಿ ಋಷಿಗೆ ಸಾಕಷ್ಟು ಅರಿವುಮೂಡಿತ್ತು.ಆ ಕೂಡಲೇ ಅಲ್ಲಿಂದ ಹೊರಟು ಅಗಲಿದ್ದ ತನ್ನ ತಾಯಿತಂದೆಯರನ್ನು ಕಂಡು ಕ್ಷಮೆ ಯಾಚಿಸಿ,ಆಶೀರ್ವಾದ ಪಡೆದು ಧರ್ಮ ಪಾಲಿಸಿದ.