ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ಎರಡು ಕಪ್ಪೆಗಳು

picture

ಮಳೆಗಾಲದ ಸಮಯ ರಾತ್ರಿ ಸಮಯ ಭೀಕರ ಸಿಡಿಲು ಗುಡುಗು ಧಾರಾಕಾರವಾಗಿ ಸುರಿಯುವ ಮಳೆ ಝರಿ ಪ್ರವಾಹದಿಂದುಕ್ಕಿ ಹರಿಯುವುದನ್ನು ಅರಿತ ಕಪ್ಪೆಗಳು ಛಂಗನೆ ನೆಗೆಯುತ್ತಾ ನೆಗೆಯುತ್ತಾ ವಲಸೆ ಹೋಗುತ್ತಿದ್ದವು, ಆಗ ಎರಡು ಕಪ್ಪೆಗಳು ಕತ್ತಲೆಯ ಕಾನನದಿ ಕಣ್ಕಾಣದೆ ಆಳವಾದ ಕಂದರದಲ್ಲಿ ಕಾಲುಜಾರಿ ಬಿದ್ದುಬಿಟ್ಟವು.ಎಷ್ಟು ಪ್ರಯತ್ನಿಸಿದರೂ ಮೇಲಕ್ಕೆ ಎಟುಕದಷ್ಟು ಆಳ, ಎರಡೂ ಕಪ್ಪೆಗಳು ಎಡಬಿಡದೆ ಜಿಗಿಯಲೆತ್ನಿಸಿದವು. ಉಳಿದ ಕಪ್ಪೆಗಳು ಇದನ್ನು ಕಂಡು    " ಅಯ್ಯೋ ಬಿದ್ದುಬಿಟ್ಟಿರಾ, ಅಷ್ಟೇ ಬಿಡಿ ಅಲ್ಲಿದ್ದರೆ ನೀವು ಬದುಕಿದ್ದರೂ ಸತ್ತಂತೆ,ಇನ್ನೇನು ನಿಮ್ಮ ಕಥೆ ಅಷ್ಟೇ" ಎಂದು ಹಾಸ್ಯ ಮಾಡುತ್ತ ನಗಲಾರಂಭಿಸಿದವು, ಈ ಎರಡೂ ಕಪ್ಪೆಗಳು ಬಿಡದೆ ಪ್ರಯತ್ನ ಮಾಡುತ್ತಿದ್ದವು, ಉಳಿದವು ಕೂಗುತ್ತಲೇ ಇದ್ದವು"ಏ ಕೇಳಿಸಲಿಲ್ಲವೇ ನಿಮಗೆ, ನೀವಿನ್ನು ಸತ್ತಂತೆ,..ಸತ್ತಂತೆ," ಅಷ್ಟರಲ್ಲಿ ಒಂದು ಕಪ್ಪೆ ನೆಗೆದೂ ನೆಗೆದೂ ಸುಸ್ತಾಗಿ ತಲೆಕೆಳಗಾಗಿ ಬಿದ್ದು ಪ್ರಾಣ ಬಿಟ್ಟಿತು, ಇನ್ನೊಂದು ಮಾತ್ರ ತನ್ನ ಪ್ರಯತ್ನವನ್ನು ಬಿಡದೇ ಮಾಡಿತ್ತು,ಮೇಲಿದ್ದ ಕಪ್ಪೆಗಳು ತಂಪಾಡಿಗೆ ಕೈಚಾಚಿ ಆಡಿಕೊಳ್ಳುತ್ತಾ ಅರಚುತ್ತಲೇ ಇದ್ದವು ಆದರೆ ಉಳಿದಿದ್ದ ಒಂದೇ ಕಪ್ಪೆ ಎಗರೀ ಎಗರೀ ಸುಸ್ತಾದರೂ ಶಕ್ತಿಮೀರಿ ಮೇಲಕ್ಕೆ ಜಿಗಿದೇ ಬಿಟ್ಟಿತು,,ಮೇಲಿದ್ದ ಕಪ್ಪೆಗಳು ಅಚ್ಚರಿಯಿಂದ ಬೆಪ್ಪಾಗಿ ಮುಂದೆಬಂದು ಅದನ್ನು ಅಭಿನಂದಿಸಿದವು,"ನಾವೆಲ್ಲಾ ನಿನ್ನನ್ನು ಅಷ್ಟು ದುರ್ಲಕ್ಷ್ಯದಿಂದ ಕಡೆಗಣಿಸಿದರೂ ನೀನು ಉತ್ಸಾಹ ಕಳೆದುಕೊಳ್ಳದೆ ಜೀವಂತವಾಗಿ ಮೇಲೇರಿ ಬಂದೆ,ನಮ್ಮನು ಕ್ಷಮಿಸು ನಿನ್ನ ಸಾಹಸ ಮೆಚ್ಚುವಂಥದ್ದು" ಎಂದು ಪ್ರಶಂಸಿಸಿದವು,ಅದಕ್ಕೆ ಆ ಕಪ್ಪೆ "ಅಯ್ಯಾ ನೀವೇನು ಹೇಳುತ್ತಿದ್ದೀರೋ ನನಗೊಂದೂ ತಿಳಿಯದು ನನಗೆ ಹುಟ್ಟು ಕಿವುಡು, ನೀವೆಲ್ಲಾ ನನ್ನ ಕಡೆ ನೋಡಿಕೊಂಡು,ಕೈ ಬೀಸುತ್ತಾ ಅಷ್ಟು ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದಗಳು" ಎಂದಿತು.
ಈ ಕಥೆಯಲ್ಲಿ ಎರಡು ನೀತಿಗಳಿವೆ.
೧.ಮಾತಿನ ಶಕ್ತಿ ಬಿದ್ದವರನ್ನು ಮೇಲಕ್ಕೂ ಎತ್ತಬಹುದು.
೨. ಕೆಳಕ್ಕೆ ಬಿದ್ದವರನ್ನು ಅದೇ ಮಾತಿನಿಂದ ಧೈರ್ಯಗೆಡಿಸಿದರೆ ಮತ್ತೂ ಪಾತಾಳಕ್ಕೆ ತಳ್ಳಿದಂತಾಗಿ ಮೃತ್ಯುವೇ ಬರಬಹುದು


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಕನಕಾಪುರ ನಾರಾಯಣ

ಕನ್ನಡ ಕಲಿಸುವುದು, ಕನ್ನಡ ಸಂಘಟನೆ, ಸಮಾಜ ಸೇವೆ ಮುಂದಾಳತ್ವ, ಕಥೆ, ಲೇಖನ ಬರಹಗಳು, ಸಂಘ ಸಂಸ್ಥೆ ಕಾರ್ಯಕ್ರಮ ನಿರ್ವಹಣೆ ಇವೇ ಮುಂತಾದ ಕೆಲಸ  ಬಿಡುವಿನಲ್ಲಿ ತೊಡಗಿಸಿಕೊಂಡಿದ್ದು. ಸಂಸಾರದಲ್ಲಿ ಸತಿಯ ಪ್ರೀತಿ ಮತ್ತು ಎರಡು ಮಕ್ಕಳ ತಂದೆತನದ ಜವಾಬ್ದಾರಿ.

ನೂರಾರು ಸಣ್ಣಕಥೆಗಳನ್ನು ಈ ವೆಬ್ಸೈಟ್ ನಲ್ಲಿ ಬರೆದಿರುವುದಲ್ಲದೇ, ಸ್ವಂತ ಅನುಭವ ಅಭಿಪ್ರಾಯ ವ್ಯಕ್ತಪಡಿಸಲು http://chakkemoggu.wordpress.com/ ಎಂಬ ಬ್ಲಾಗ್ ನಲ್ಲೂ ಇವರ ಲೇಖನ ಕಾಣಹುದು.ಸಿಡ್ನಿಯಲ್ಲಿ ಸುಗಮ ಗಾನ ಸಮಾಜ, ಹೊರನಾಡ ಚಿಲುಮೆ ಕನ್ನಡದ ಮೊದಲ ಇ ಮಾಸಪತ್ರಿಕೆ,ಮೂರು ಕನ್ನಡ ವಾರಾಂತ್ಯದ ಶಾಲೆಗಳ ಆರಂಭಕ್ಕೂ ಕಾರಣರಾದವರಲ್ಲಿ ಮುಖ್ಯಸ್ಥರು.

 


ಶ್ರೀ. ಕನಕಾಪುರ ನಾರಾಯಣ ಅವರಿಂದ ಮತ್ತಷ್ಟು ಲೇಖನಗಳು


pictureವಿಚಿತ್ರ ಲೋಕ
pictureದೂರದೃಷ್ಟಿ
pictureಬೆಕ್ಕು ಬಾವುಲಿ
pictureಧರ್ಮ
pictureಗಡ್ಡ
pictureಗಾಂಪರ ಗುರು(ಹಾಸ್ಯ)
pictureಮದರ್ಸ್ ಡೇ
pictureಸುಂದರಾಂಗ !
pictureಹಗಲು - ಕನಸು (ಹಾಸ್ಯ)
pictureಮೆಟ್ಟಿಲು:(ಹಾಸ್ಯ)

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2023