ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ಕುಂಟ ನಾಯಿ ಮರಿ

picture

ದೂರದ ಫಾರ್ಮ್ ಹೌಸ್ ಬಳಿಯಲ್ಲಿ "ನಾಯಿ ಮರಿಗಳು ಮಾರಾಟಕ್ಕಿವೆ " ಎಂದು ಫಲಕವೊಂದು ತೂಗಾಡುತ್ತಿತ್ತು. ಡ್ರೈವರ್ ಗೆ ಕಾರ್ ನಿಲ್ಲಿಸಲು ಹೇಳಿ ಪುಟ್ಟ ಬಾಲಕ ಕಾರಿನಿಂದಿಳಿದು ಅಲ್ಲಿದ್ದ ಮಾಲೀಕನನ್ನು ಕಂಡು "ನನಗೆ ಒಂದು ನಾಯಿಮರಿ ಬೇಕಿದೆ ಕೊಳ್ಳಬಹುದೇ" ಎಂದ, ಬೋರ್ಡ ಹಾಕಿರುವುದೇ ಉಂಟಂತೆ ಸರಿ  "ಒಂದು ನಾಯಿಮರಿಗೆ ಹತ್ತು ಡಾಲರ್ ಆಗುತ್ತದೆ" ಎಂದ ಮಾಲೀಕ, ಬಾಲಕ ತನ್ನ ಜೇಬಿನಡಿಗೆ ಕೈ ಹಾಕಿ ಹುಡುಕಿ ತಡಕಿ "ನನ್ನ ಬಳಿ ಇರುವುದೇ ಎಂಟು ಡಾಲರ್ ಮಾತ್ರ, ಆಗಬಹುದಾ" ಎಂದು ಮುಖ ಪೆಚ್ಚಗೆ ಮಾಡಿ ಹೇಳಿದ. ಹೋಗಲಿ ಮಕ್ಕಳಿಗೆ ತಾನೆ ಎಂದು ಮಾಲೀಕ ನಾಯಿ ಗೂಡಿನ ಕಡೆ ಜೋರಾಗಿ ಶಿಳ್ಳೆ ಹೊಡೆದ, ಉಣ್ಣೆಯ ಉಂಡೆಗಳಂತೆ ಗುಂಡುಗುಂಡಾದ ನಾಯಿ ಮರಿಗಳು ಗುಡುಗುಡು ಓಡಿ ಬಂದವು,"ನಿನಗೆ ಯಾವುದು ಬೇಕೇ ಅರಿಸಿಕೋ" ಎಂದ ಮಾಲೀಕ,ಅಷ್ಟರಲ್ಲಿ ಗೂಡಿನ ಕಡೆಯಿಂದ ಮತ್ತೊಂದು ಮರಿ ನಿಧಾನವಾಗಿ ಬೇರೆ ಮರಿಗಳ ಗುಂಪನ್ನು ಸೇರಲು ಕಷ್ಟಪಟ್ಟು ಓಡುತ್ತಾ ಬರುವುದನ್ನು ಕಂಡು ಬಾಲಕ "ನನಗೆ ಆ ಮರಿ ಬೇಕು" ಎಂದ, "ಅಯ್ಯೋ ಅದು ಬೇಡ ಮಗು ನಿನಗೆ ಅದರ ಜೊತೆ ಆಡಲು ಅಷ್ಟು ಸೂಕ್ತವಲ್ಲ ನೋಡು ಅದು ಕುಂಟ ನಾಯಿ ಮರಿ" ಎಂದ.
ತಕ್ಷಣ ಬಾಲಕ ತನ್ನ ಬಲಗಾಲಿನ ಪ್ಯಾಂಟನ್ನು ಮೇಲಕ್ಕೆ ಸರಿಸಿ ಸ್ಟೀಲ್ ನಿಂದ ಮಾಡಿದ ತನ್ನ ಕೃತಕವಾದ ಕಾಲನ್ನು ತೋರಿಸಿ "ಇರಲಿ ನನಗೂ ಅಷ್ಟೇನು ಜೋರಾಗಿ ಓಡಲು ಸಾಧ್ಯವಿಲ್ಲ ಅದರ ಕಷ್ಟವನ್ನು ನಾನೊಬ್ಬನೇ ಅರ್ಥಮಾಡಿಕೊಳ್ಳಬಲ್ಲೆ" ಎಂದು ಓಡಿಬಂದು ಬಾಗಿ ಬಾಚಿ ತಬ್ಬಿ ಆ ಮರಿಯನ್ನು ಮನೆಗೆ ಕರೆದುಕೊಂಡು ಹೋದ.


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಕನಕಾಪುರ ನಾರಾಯಣ

ಕನ್ನಡ ಕಲಿಸುವುದು, ಕನ್ನಡ ಸಂಘಟನೆ, ಸಮಾಜ ಸೇವೆ ಮುಂದಾಳತ್ವ, ಕಥೆ, ಲೇಖನ ಬರಹಗಳು, ಸಂಘ ಸಂಸ್ಥೆ ಕಾರ್ಯಕ್ರಮ ನಿರ್ವಹಣೆ ಇವೇ ಮುಂತಾದ ಕೆಲಸ  ಬಿಡುವಿನಲ್ಲಿ ತೊಡಗಿಸಿಕೊಂಡಿದ್ದು. ಸಂಸಾರದಲ್ಲಿ ಸತಿಯ ಪ್ರೀತಿ ಮತ್ತು ಎರಡು ಮಕ್ಕಳ ತಂದೆತನದ ಜವಾಬ್ದಾರಿ.

ನೂರಾರು ಸಣ್ಣಕಥೆಗಳನ್ನು ಈ ವೆಬ್ಸೈಟ್ ನಲ್ಲಿ ಬರೆದಿರುವುದಲ್ಲದೇ, ಸ್ವಂತ ಅನುಭವ ಅಭಿಪ್ರಾಯ ವ್ಯಕ್ತಪಡಿಸಲು http://chakkemoggu.wordpress.com/ ಎಂಬ ಬ್ಲಾಗ್ ನಲ್ಲೂ ಇವರ ಲೇಖನ ಕಾಣಹುದು.ಸಿಡ್ನಿಯಲ್ಲಿ ಸುಗಮ ಗಾನ ಸಮಾಜ, ಹೊರನಾಡ ಚಿಲುಮೆ ಕನ್ನಡದ ಮೊದಲ ಇ ಮಾಸಪತ್ರಿಕೆ,ಮೂರು ಕನ್ನಡ ವಾರಾಂತ್ಯದ ಶಾಲೆಗಳ ಆರಂಭಕ್ಕೂ ಕಾರಣರಾದವರಲ್ಲಿ ಮುಖ್ಯಸ್ಥರು.

 


ಶ್ರೀ. ಕನಕಾಪುರ ನಾರಾಯಣ ಅವರಿಂದ ಮತ್ತಷ್ಟು ಲೇಖನಗಳು


pictureವಿಚಿತ್ರ ಲೋಕ
pictureದೂರದೃಷ್ಟಿ
pictureಬೆಕ್ಕು ಬಾವುಲಿ
pictureಧರ್ಮ
pictureಗಡ್ಡ
pictureಗಾಂಪರ ಗುರು(ಹಾಸ್ಯ)
pictureಮದರ್ಸ್ ಡೇ
pictureಸುಂದರಾಂಗ !
pictureಹಗಲು - ಕನಸು (ಹಾಸ್ಯ)
pictureಮೆಟ್ಟಿಲು:(ಹಾಸ್ಯ)

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2023