ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ದೇವರೆಲ್ಲಿದ್ದಾನೆ ?

picture

ಅಣ್ಣ ತಮ್ಮಂದಿರಾದ ಶಾಮ ರಾಮ ಬಹಳ ತುಂಟ ಬಾಲಕರು . ಊರಲ್ಲೆಲ್ಲಾ ಇವರದ್ದೇ ದೂರು. ಏನಾದರೂ ಅನಾಹುತ ಮಾಡುವುದು ಓಡಿ ಮನೆ ಸೇರುವುದು. ತಾಯಿ ಈ ರಗಳೆಗೆ ರೋಸಿಹೋಗಿ ಒಬ್ಬ ಬ್ರಾಹ್ಮಣ ಗುರುವಿನ ಬಳಿಗೆ ವೇದ ಪಾಠಕ್ಕೆಂದು ಸೇರಿಸಿದಳು.ಮೊದಲ ದಿನ , ಮೊದಲ ಪ್ರಶ್ನೆ, ಅಣ್ಣ ರಾಮನಿಗೆ ಗುರು ಕೇಳಿದ " ದೇವರು ಎಲ್ಲಿದ್ದಾನೆ ? ಹೇಳು".......ಉತ್ತರ ಬರಲಿಲ್ಲ , ಗುರುಗಳು ಇನ್ನೂ ಸ್ವಲ್ಪ ರೇಗಿ ಕೇಳಿದರು "ದೇವರು ಎಲ್ಲಿದ್ದಾನೆ ? " ಊಹು, ಉತ್ತರವಿಲ್ಲ , ಗುರುಗಳು ಇನ್ನೂ ಸ್ವಲ್ಪ ಗಟ್ಟಿ ಧ್ವನಿಯಲ್ಲಿ ಕೇಳಿದರು....ತಕ್ಷಣ ರಾಮ ಭಯದಿಂದ ಆ ಜಾಗದಿಂದ ತಪ್ಪಿಸಿಕೊಂಡು ಓಡಿ ಹೊರಗೆಬಂದು ತಮ್ಮನಾದ ಶಾಮನನ್ನೂ ಎಳೆದುಕೊಂಡು ಊರ ಹೊರಗೆ ಓಡಿದ.ತಮ್ಮ ಕೇಳಿದ " ಯಾಕಣ್ಣಾ ಹೀಗೆ ಹೆದರಿ ಓಡಿಬಂದದ್ದು ?" ಅದಕ್ಕೆ ರಾಮ"ನಾವು ಮತ್ತೆ ಪೀಕಲಾಟಕ್ಕೆ ಸಿಕ್ಕಿದ್ದೇವೆ".... " ಏನಂತೆ?"....... " ನೋಡು ದೇವರು ಕಳೆದು ಹೋಗಿದ್ದಾನಂತೆ ನಾವೇ ಅದಕ್ಕೆ ಕಾರಣ ಅಂತೆ ? ! ? ! " ಎಂದ.


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಕನಕಾಪುರ ನಾರಾಯಣ

ಕನ್ನಡ ಕಲಿಸುವುದು, ಕನ್ನಡ ಸಂಘಟನೆ, ಸಮಾಜ ಸೇವೆ ಮುಂದಾಳತ್ವ, ಕಥೆ, ಲೇಖನ ಬರಹಗಳು, ಸಂಘ ಸಂಸ್ಥೆ ಕಾರ್ಯಕ್ರಮ ನಿರ್ವಹಣೆ ಇವೇ ಮುಂತಾದ ಕೆಲಸ  à²¬à²¿à²¡à³à²µà²¿à²¨à²²à³à²²à²¿ ತೊಡಗಿಸಿಕೊಂಡಿದ್ದು. ಸಂಸಾರದಲ್ಲಿ ಸತಿಯ ಪ್ರೀತಿ ಮತ್ತು ಎರಡು ಮಕ್ಕಳ ತಂದೆತನದ ಜವಾಬ್ದಾರಿ.

ನೂರಾರು ಸಣ್ಣಕಥೆಗಳನ್ನು ಈ ವೆಬ್ಸೈಟ್ ನಲ್ಲಿ ಬರೆದಿರುವುದಲ್ಲದೇ, ಸ್ವಂತ ಅನುಭವ ಅಭಿಪ್ರಾಯ ವ್ಯಕ್ತಪಡಿಸಲು http://chakkemoggu.wordpress.com/ à²Žà²‚ಬ ಬ್ಲಾಗ್ ನಲ್ಲೂ ಇವರ ಲೇಖನ ಕಾಣಹುದು.ಸಿಡ್ನಿಯಲ್ಲಿ ಸುಗಮ ಗಾನ ಸಮಾಜ, ಹೊರನಾಡ ಚಿಲುಮೆ ಕನ್ನಡದ ಮೊದಲ ಇ ಮಾಸಪತ್ರಿಕೆ,ಮೂರು ಕನ್ನಡ ವಾರಾಂತ್ಯದ ಶಾಲೆಗಳ ಆರಂಭಕ್ಕೂ ಕಾರಣರಾದವರಲ್ಲಿ ಮುಖ್ಯಸ್ಥರು.

 


ಶ್ರೀ. ಕನಕಾಪುರ ನಾರಾಯಣ ಅವರಿಂದ ಮತ್ತಷ್ಟು ಲೇಖನಗಳು


pictureವಿಚಿತ್ರ ಲೋಕ
pictureದೂರದೃಷ್ಟಿ
pictureಬೆಕ್ಕು ಬಾವುಲಿ
pictureಧರ್ಮ
pictureಗಡ್ಡ
pictureಗಾಂಪರ ಗುರು(ಹಾಸ್ಯ)
pictureಮದರ್ಸ್ ಡೇ
pictureಸುಂದರಾಂಗ !
pictureಹಗಲು - ಕನಸು (ಹಾಸ್ಯ)
pictureಮೆಟ್ಟಿಲು:(ಹಾಸ್ಯ)

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2025