ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ಕಾಗಕ್ಕನ ಶಕ್ತಿ

picture

ಅದೊಂದು ಸಮುದ್ರತೀರ. ಮೀನುಗಾರರ ಜೊತೆಗೆ ಕೊಕ್ಕರೆ, ಕಾಗೆ,ಕಡಲ ಹಕ್ಕಿ ಹಾಗೂ ಇನ್ನೂ ಅನೇಕ ಪಕ್ಷಿಗಳು ಮೀನು ಹಂಚಿಕೊಂಡು ತಿನ್ನುತ್ತಾ ವಾಸವಾಗಿದ್ದವು. ಹೀಗೇ ಬಲೆ ಬೀಸಲು ದೂರ ಸಾಗಿದ ಮೀನುಗಾರರನ್ನೇ ಕಾಯುತ್ತಾ ಕುಳಿತಿರಲು ಕುಚೇಷ್ಟೆ ಮಾಡಲೆಂದು ಕಾಗೆಯೊಂದು ಮುದಿ ಕೊಕ್ಕರೆಯೊಂದಕ್ಕೆ ಹೇಳಿತು"ಅಯ್ಯಾ ನಿನ್ನ ರೆಕ್ಕೆಗಳೇಕೆ ಅಷ್ಟು ಬಡಕಲಾಗಿವೆ ನೋಡು ನನ್ನ ರೆಕ್ಕೆ ಪುಕ್ಕಗಳು ಎಂಥಾ ಬಲಶಾಲಿಯಾಗಿವೆ, ಅದಕ್ಕೇ ಇರಬೇಕು ನೀನು ಯಾವಾಗಲೂ ತಲೆ ತಗ್ಗಿಸಿ ನೀರಿನಲ್ಲಿ ಮೀನನ್ನು ಕಾಯುತ್ತಾ ನಿಂತಿರುವೆ,ಅದೇ ನನ್ನನು ನೋಡು"ಎಂದು ಪುರ್ ಎಂದು ಹಾರಿ ನಾಲ್ಕುಬಾರಿ ಗಾಳಿಯಲ್ಲೇ ಲಾಗ ಹಾಕಿ ವೇಗವಾಗಿ ಬಂದು ಕೊಕ್ಕರೆಯ ಪಕ್ಕಕ್ಕೆ ಕುಳಿತು "ನಿನ್ನಿಂದ ಇದು ಈ ಜನುಮದಲ್ಲಿ ಸಾಧ್ಯವಿಲ್ಲ ಬಿಡು,ಹೀಗೆ ಹಾರಿದರೆ ಮಾತ್ರ ಮೀನುಗಾರರ ಬಲೆಯಿಂದ ನಾವು ಒಂದೆರೆಡು ಮೀನುಗಳನ್ನು ಕಸಿದುಕೊಳ್ಳಲು ಸಾಧ್ಯ."ಎಂದು ಜಂಭದಿಂದ ನುಡಿಯಿತು.ಅದಕ್ಕೆ ಕೊಕ್ಕರೆ "ಅರೆರೆ ಕಾಗಕ್ಕಾ ನನಗೂ ಹಾರಲು ಬರದೇ ಏನಿಲ್ಲ,ನಾನೂ ಚೆನ್ನಾಗೇ ಹಾರಬಲ್ಲೆ"ಎಂದಿತು. ಈ ಮಾತನ್ನು ಕೇಳಿ ಕಾಗೆ ಪಕ್ಕನೆ ನಕ್ಕಿತು"ಸರಿ ಹಾಗಾದರೆ ದೂರಕ್ಕೆ ಹಾರುವ ಸ್ಪರ್ಧೆ, ನಿನ್ನಲ್ಲಿ ಗುಂಡಿಗೆ ಇದ್ದಲ್ಲಿ ಬಾ"ಎಂದು ಸವಾಲೆಸೆಯಿತು. ಸರಿ ಕೊಕ್ಕರೆ ಅದಕ್ಕೆ ಒಪ್ಪಿ ಮುದುಡಿದ್ದ ತನ್ನ ರೆಕ್ಕೆ ಬಿಚ್ಚಿ, ಒಮ್ಮೆ ಪಟಪಟನ ಒದರಿ ನಿಧಾನವಾಗಿ ಹಾರಲು ಆರಾಂಭ ಮಾಡಿತು,ಕಾಗೆ ಭರ್ರನೆ ಅದರ ಪಕ್ಕಕ್ಕೇ ಹಾರಿ ಬಂದು"ಇಷ್ಟೇನಾ ನಿನ್ನ ವೇಗ? ಅಯ್ಯಾ ನಾನೇನೋ ನಿನ್ನ ರೆಕ್ಕೆ ಅಗಲ ನೋಡಿ ಭಾರೀ !.........."ಎನ್ನುತ್ತಾ ಎಡಬಿಡದೆ ಆಡಿಕೊಳ್ಳುತ್ತಾ ಜೊತೆಯಲ್ಲೇ ಹಾರುತ್ತಾ ಬಂದಿತು.ಸ್ವಲ್ಪ ಸಮಯದ ನಂತರ ಕಾಗೆ ಒಂದೇ ಸಮನೆ ಮಾತನಾಡಿ ಸುಸ್ತಾಗಿ ಬಾಯಾರಿದಂತಾಗಿ ಒಮ್ಮೆ ಬಂದ ದಾರಿಯ ಕಡೆಗೆ ತಿರುಗಿ ನೋಡಿತು. ದಡ ಕಾಣದಷ್ಟು ದೂರ ತಲುಪಿದ್ದರು. ಕಾಗೆಗೆ ರೆಕ್ಕೆಗಳಲ್ಲಿ ಶಕ್ತಿ ಕಡಿಮೆಯಾಗತೊಡಗಿತು,ಆದರೂ ಸ್ಪರ್ಧೆಯಲ್ಲವೇ, ಧೈರ್ಯದಿಂದ ಕೊಕ್ಕರೆಯನ್ನು ಕೇಳಿತು"ಇನ್ನೂ ಎಷ್ಟು ಹೊತ್ತು ಹೀಗೇ ಹಾರುವುದು?" ಅದಕ್ಕೆ ಕೊಕ್ಕರೆ ಶಾಂತವಾಗಿ ಉತ್ತರಿಸಿತು "ಎನ್ನೇನು 2-3 ದಿನ ಅಷ್ಟೇ"....."ಹಾ! 2-3 ದಿನ! ನನ್ನ ಕೈಲಾಗದು,ಈಗಲೇ ನನ್ನಲ್ಲಿ ತಿರುಗಿ ತೀರಕ್ಕೆ ಹೋಗುವಷ್ಟೂ ಶಕ್ತಿಯಿಲ್ಲ ಇನ್ನು 2-3 ದಿನ! ಅಯ್ಯಾ ನನ್ನನು ಕಾಪಾಡು ನನಗೆ ನಿನ್ನಂತೆ ನೀರಿನ ಮೇಲೆ ತೇಲಲೂ ಬಾರದು"ಎಂದು ಗೋಗರೆಯಿತು. ಅದಕ್ಕೆ ಕೊಕ್ಕರೆ "ಬಾ ನನ್ನ ಅಗಲವಾದ ಬೆನ್ನಿನ ಮೇಲೆ ಕೂಡು ನಾವು ಹೊರಟ ತೀರಕ್ಕೆ ಕರೆದೊಯ್ಯುವೆ "ಎಂದು ಹೇಳಿ ಕಾಗೆಯನ್ನು ಕೂಡಿಸಿಕೊಂಡು ವಾಪಸ್ ತಂದು ತೀರಕ್ಕೆ ಬಿಟ್ಟಿತು.ಕಾಗೆ ತನ್ನ ತನ್ನ ತಪ್ಪರಿತು,ಕ್ಷಮೆ ಕೋರಿ,ತಲೆ ತಾಗಿಸಿತು.


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಕನಕಾಪುರ ನಾರಾಯಣ

ಕನ್ನಡ ಕಲಿಸುವುದು, ಕನ್ನಡ ಸಂಘಟನೆ, ಸಮಾಜ ಸೇವೆ ಮುಂದಾಳತ್ವ, ಕಥೆ, ಲೇಖನ ಬರಹಗಳು, ಸಂಘ ಸಂಸ್ಥೆ ಕಾರ್ಯಕ್ರಮ ನಿರ್ವಹಣೆ ಇವೇ ಮುಂತಾದ ಕೆಲಸ  ಬಿಡುವಿನಲ್ಲಿ ತೊಡಗಿಸಿಕೊಂಡಿದ್ದು. ಸಂಸಾರದಲ್ಲಿ ಸತಿಯ ಪ್ರೀತಿ ಮತ್ತು ಎರಡು ಮಕ್ಕಳ ತಂದೆತನದ ಜವಾಬ್ದಾರಿ.

ನೂರಾರು ಸಣ್ಣಕಥೆಗಳನ್ನು ಈ ವೆಬ್ಸೈಟ್ ನಲ್ಲಿ ಬರೆದಿರುವುದಲ್ಲದೇ, ಸ್ವಂತ ಅನುಭವ ಅಭಿಪ್ರಾಯ ವ್ಯಕ್ತಪಡಿಸಲು http://chakkemoggu.wordpress.com/ ಎಂಬ ಬ್ಲಾಗ್ ನಲ್ಲೂ ಇವರ ಲೇಖನ ಕಾಣಹುದು.ಸಿಡ್ನಿಯಲ್ಲಿ ಸುಗಮ ಗಾನ ಸಮಾಜ, ಹೊರನಾಡ ಚಿಲುಮೆ ಕನ್ನಡದ ಮೊದಲ ಇ ಮಾಸಪತ್ರಿಕೆ,ಮೂರು ಕನ್ನಡ ವಾರಾಂತ್ಯದ ಶಾಲೆಗಳ ಆರಂಭಕ್ಕೂ ಕಾರಣರಾದವರಲ್ಲಿ ಮುಖ್ಯಸ್ಥರು.

 


ಶ್ರೀ. ಕನಕಾಪುರ ನಾರಾಯಣ ಅವರಿಂದ ಮತ್ತಷ್ಟು ಲೇಖನಗಳು


pictureವಿಚಿತ್ರ ಲೋಕ
pictureದೂರದೃಷ್ಟಿ
pictureಬೆಕ್ಕು ಬಾವುಲಿ
pictureಧರ್ಮ
pictureಗಡ್ಡ
pictureಗಾಂಪರ ಗುರು(ಹಾಸ್ಯ)
pictureಮದರ್ಸ್ ಡೇ
pictureಸುಂದರಾಂಗ !
pictureಹಗಲು - ಕನಸು (ಹಾಸ್ಯ)
pictureಮೆಟ್ಟಿಲು:(ಹಾಸ್ಯ)

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2023