ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ಉಪಕಾರಿ

picture

ಹಿಂದೊಮ್ಮೆ ಇಬ್ಬರು ವ್ಯಾಪಾರಿಗಳು ಕಾಲ್ನಡಿಗೆಯಲ್ಲೇ ಊರೂರು ಅಲೆಯುತ್ತಾ ತಮ್ಮಕೆಲಸ ಮಾಡುತ್ತಿರಲು, ಮಧ್ಯಾಹ್ನದ ಉರಿಬಿಸಿಲನ್ನು ತಡೆಯಲಾರದೆ ಒಂದು ಮರದ ಬಳಿ ದಣಿವು ಆರಿಸಿಕೊಳ್ಳಲು ಕುಳಿತರು. ತಂಪಾದ ನೆರಳಿನಲ್ಲಿ ಕುಳಿತಲ್ಲೇ ತಾವು ತಂದ ಬುತ್ತಿ ಬಿಚ್ಚಿ ಹಸಿವನ್ನೂ ನಿವಾರಿಸಿಕೊಂಡರು. ಹಾಗೇ ಮರಕ್ಕೆ ಒರಗಿ ಸ್ವಲ್ಪ ವಿಶ್ರಾಂತಿ ಪಡೆದರು. ಸ್ವಲ್ಪ ಸಮಯದ ನಂತರ ಒಬ್ಬ ಮರದ ಕಡೆ ನೋಡುತ್ತಾ "ಅರೆ ಇದೇನು ಮರವಯ್ಯಾ ಒಂದು ಹಣ್ಣೂ ಬಿಡುವುದಿಲ್ಲ' ಅಂದ.ಅದಕ್ಕೆ ಮತ್ತೊಬ್ಬ `ಹಣ್ಣು ಬಿಡುವುದಿರಲಿ ಮರ ಕೂಡಾ ಗಟ್ಟಿ ಇಲ್ಲ, ಯಾವ ಕೆಲಸಕ್ಕೂ ಉಪಯೋಗಿಸಲು ಯೋಗ್ಯವಿಲ್ಲ, ಶುದ್ಧ ಅಪ್ರಯೋಜಕ ಮರ' ಎಂದ. ತಕ್ಷಣ ಆ ಮರಕ್ಕೆ ಕೋಪ ಬಂದು 'ಎಲೈ ಮಾನವರೇ ಈಗ ನನ್ನ ನೆರಳನ್ನಾದರೂ ಅನುಭವಿಸುತ್ತಿದ್ದೀರಲ್ಲಾ,ಅದಕ್ಕಾದರೂ ಕೃತಜ್ಞತೆ ಬೇಡವೆ ?'ಎಂದುಕೊಂಡು ತನ್ನ ಒಂದು ಒಣಗಿದ್ದ ಟೊಂಗೆಯನ್ನು ಕಳಚಿ ಬಿಟ್ಟಿತು.ಅದು ಆವ್ಯಾಪಾರಿಗಳ ಮೇಲೆ ಬಿದ್ದಿತು,ಕೂಡಲೇ ಅವರು ಅಲ್ಲಿಂದ ಜಾಗ ಖಾಲಿ ಮಾಡಿದರು.


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಕನಕಾಪುರ ನಾರಾಯಣ

ಕನ್ನಡ ಕಲಿಸುವುದು, ಕನ್ನಡ ಸಂಘಟನೆ, ಸಮಾಜ ಸೇವೆ ಮುಂದಾಳತ್ವ, ಕಥೆ, ಲೇಖನ ಬರಹಗಳು, ಸಂಘ ಸಂಸ್ಥೆ ಕಾರ್ಯಕ್ರಮ ನಿರ್ವಹಣೆ ಇವೇ ಮುಂತಾದ ಕೆಲಸ  à²¬à²¿à²¡à³à²µà²¿à²¨à²²à³à²²à²¿ ತೊಡಗಿಸಿಕೊಂಡಿದ್ದು. ಸಂಸಾರದಲ್ಲಿ ಸತಿಯ ಪ್ರೀತಿ ಮತ್ತು ಎರಡು ಮಕ್ಕಳ ತಂದೆತನದ ಜವಾಬ್ದಾರಿ.

ನೂರಾರು ಸಣ್ಣಕಥೆಗಳನ್ನು ಈ ವೆಬ್ಸೈಟ್ ನಲ್ಲಿ ಬರೆದಿರುವುದಲ್ಲದೇ, ಸ್ವಂತ ಅನುಭವ ಅಭಿಪ್ರಾಯ ವ್ಯಕ್ತಪಡಿಸಲು http://chakkemoggu.wordpress.com/ à²Žà²‚ಬ ಬ್ಲಾಗ್ ನಲ್ಲೂ ಇವರ ಲೇಖನ ಕಾಣಹುದು.ಸಿಡ್ನಿಯಲ್ಲಿ ಸುಗಮ ಗಾನ ಸಮಾಜ, ಹೊರನಾಡ ಚಿಲುಮೆ ಕನ್ನಡದ ಮೊದಲ ಇ ಮಾಸಪತ್ರಿಕೆ,ಮೂರು ಕನ್ನಡ ವಾರಾಂತ್ಯದ ಶಾಲೆಗಳ ಆರಂಭಕ್ಕೂ ಕಾರಣರಾದವರಲ್ಲಿ ಮುಖ್ಯಸ್ಥರು.

 


ಶ್ರೀ. ಕನಕಾಪುರ ನಾರಾಯಣ ಅವರಿಂದ ಮತ್ತಷ್ಟು ಲೇಖನಗಳು


pictureವಿಚಿತ್ರ ಲೋಕ
pictureದೂರದೃಷ್ಟಿ
pictureಬೆಕ್ಕು ಬಾವುಲಿ
pictureಧರ್ಮ
pictureಗಡ್ಡ
pictureಗಾಂಪರ ಗುರು(ಹಾಸ್ಯ)
pictureಮದರ್ಸ್ ಡೇ
pictureಸುಂದರಾಂಗ !
pictureಹಗಲು - ಕನಸು (ಹಾಸ್ಯ)
pictureಮೆಟ್ಟಿಲು:(ಹಾಸ್ಯ)

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2025