ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ಚೋರ ಬಾಲಕ

picture

ಆಶ್ರಮವೊಂದರಲ್ಲಿ ಹತ್ತಾರು ವಿಧ್ಯಾರ್ಥಿಗಳು ಕಲಿಯುತ್ತಿದ್ದರು.ಅವರಲ್ಲಿ ಒಬ್ಬ ಹುಡುಗ ಬೇರೊಬ್ಬರ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದ.ಗುರುಗಳಿಗೆ ದೂರು ಕೊಟ್ಟರೂ ಅವರು ಸುಮ್ಮನೆ ಇದ್ದರು.ಒಂದು ದಿನ ಅವನ ಕಳ್ಳತನ ಮಿತಿಮೀರಿ ದೂರು ಕೊಟ್ಟರೂ ತಮ್ಮ ಗುರುಗಳೂ ಆತನಿಗೆ ಏನೂ ಕ್ರಮ ತೆಗೆದುಕೊಳ್ಳದಿರುವುದನ್ನು ಕಂಡು ಬೇರೆ ವಿದ್ಯಾರ್ಥಿಗಳೆಲ್ಲಾ ಆ ಶ್ರಮವನ್ನೇ ತ್ಯಜಿಸಿ ಹೋಗಲು ನಿರ್ಧರಿಸಿದರು.ಆಗ ಗುರುಗಳು ವಿಷಯ ತಿಳಿದು ಎಲ್ಲರನ್ನೂ ಕರೆದು"ಮಕ್ಕಳೇ ನೀವೆಲ್ಲಾ ಒಳ್ಳೆಯ ಮಕ್ಕಳು ಇಲ್ಲಿಂದ ಹೊರಟರೂ ನಿಮಗೆ ಬೇರೆ ಆಶ್ರಮ ಸೇರುವುದು ಕಷ್ಟವಿಲ್ಲ,ಆದರೆ ನಿಮ್ಮ ಸಹೋದರನಿಗೆ ಎಲ್ಲಿ ಆಶ್ರಯ ಸಿಗುತ್ತದೆ ಹೇಳಿ,ಅವನಿಗಿನ್ನೂ ತಪ್ಪು-ಸರಿಗಳ ಅರಿವೇ ಇಲ್ಲ,ನೀವೆಲ್ಲಾ ಹೋದರೂ ಆತನನ್ನು ಕೈಬಿಡುವಹಾಗಿಲ್ಲ ನಾನು" ಎಂದರು. ತುಂಟ ಹುಡುಗನ ಕಣ್ಣಿನಿಂದ ಕೆನ್ನೆಯ ಮೇಲೆ ನೀರು ಹರಿಯಿತು.ತನ್ನ ತಪ್ಪನ್ನರಿತು ಕ್ಷಮೆ ಯಾಚಿಸಿದ.


 


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಕನಕಾಪುರ ನಾರಾಯಣ

ಕನ್ನಡ ಕಲಿಸುವುದು, ಕನ್ನಡ ಸಂಘಟನೆ, ಸಮಾಜ ಸೇವೆ ಮುಂದಾಳತ್ವ, ಕಥೆ, ಲೇಖನ ಬರಹಗಳು, ಸಂಘ ಸಂಸ್ಥೆ ಕಾರ್ಯಕ್ರಮ ನಿರ್ವಹಣೆ ಇವೇ ಮುಂತಾದ ಕೆಲಸ  à²¬à²¿à²¡à³à²µà²¿à²¨à²²à³à²²à²¿ ತೊಡಗಿಸಿಕೊಂಡಿದ್ದು. ಸಂಸಾರದಲ್ಲಿ ಸತಿಯ ಪ್ರೀತಿ ಮತ್ತು ಎರಡು ಮಕ್ಕಳ ತಂದೆತನದ ಜವಾಬ್ದಾರಿ.

ನೂರಾರು ಸಣ್ಣಕಥೆಗಳನ್ನು ಈ ವೆಬ್ಸೈಟ್ ನಲ್ಲಿ ಬರೆದಿರುವುದಲ್ಲದೇ, ಸ್ವಂತ ಅನುಭವ ಅಭಿಪ್ರಾಯ ವ್ಯಕ್ತಪಡಿಸಲು http://chakkemoggu.wordpress.com/ à²Žà²‚ಬ ಬ್ಲಾಗ್ ನಲ್ಲೂ ಇವರ ಲೇಖನ ಕಾಣಹುದು.ಸಿಡ್ನಿಯಲ್ಲಿ ಸುಗಮ ಗಾನ ಸಮಾಜ, ಹೊರನಾಡ ಚಿಲುಮೆ ಕನ್ನಡದ ಮೊದಲ ಇ ಮಾಸಪತ್ರಿಕೆ,ಮೂರು ಕನ್ನಡ ವಾರಾಂತ್ಯದ ಶಾಲೆಗಳ ಆರಂಭಕ್ಕೂ ಕಾರಣರಾದವರಲ್ಲಿ ಮುಖ್ಯಸ್ಥರು.

 


ಶ್ರೀ. ಕನಕಾಪುರ ನಾರಾಯಣ ಅವರಿಂದ ಮತ್ತಷ್ಟು ಲೇಖನಗಳು


pictureವಿಚಿತ್ರ ಲೋಕ
pictureದೂರದೃಷ್ಟಿ
pictureಬೆಕ್ಕು ಬಾವುಲಿ
pictureಧರ್ಮ
pictureಗಡ್ಡ
pictureಗಾಂಪರ ಗುರು(ಹಾಸ್ಯ)
pictureಮದರ್ಸ್ ಡೇ
pictureಸುಂದರಾಂಗ !
pictureಹಗಲು - ಕನಸು (ಹಾಸ್ಯ)
pictureಮೆಟ್ಟಿಲು:(ಹಾಸ್ಯ)

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2025