ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ಮೃಗರಾಜ(ಹಾಸ್ಯ)

picture

ಕಾಡಿನ ರಾಜನಾದ ಸಿಂಹವು ಆಗಿಂದಾಗ್ಗೆ ಸಭೆ ಸೇರಿ ಎಲ್ಲ ಪ್ರಾಣಿಗಳನ್ನು ತನ್ನ ಹತೋಟಿಯಲ್ಲಿಟ್ಟುಕೊಂಡು ಹೆದರಿಸುತ್ತಾ ಕಾಲಕಳೆದಿತ್ತು.ಒಮ್ಮೆ ಆನೆಯ ಮಾತು ಕೇಳಿ ಕೆಲವು ಪ್ರಾಣಿಗಳು ಬೇರೆ ಪ್ರಾಂತ್ಯಕ್ಕೆ ಕಾಲಿಟ್ಟವು.ಇದನ್ನು ಕೇಳಿದ ಸಿಂಹವು ಕೋಪಗೊಂಡು ಮತ್ತೆ ಸಭೆ ಸೇರಿಸಿ ಒಂದೊಂದು ಪ್ರಾಣಿಯಮೇಲೂ ಎರಗಿ "ಯಾರು ಈ ಕಾಡಿಗೆ ರಾಜ?"ಎಂದು ಘರ್ಜಿಸಿತು,ಚೂಪಾದ ಉಗುರು,ಕೆರಳಿದ ಕೇಸರನನ್ನು ಕಂಡು ಬೆದರಿ ಎಲ್ಲವೂ"ನೀನೇ,ನೀನೇ"ಎಂದವು, ಸಿಂಹವು ಆನೆಯ ಮೇಲೂ ಎರಗಿತು,ಜೋರಾಗಿ ಘರ್ಜಿಸಿ "ಯಾರು ಈ ಕಾಡಿಗೆ ರಾಜ?"ಎಂದಿತು, ಆನೆ ಒಮ್ಮೆಲೇ ತನ್ನ ಸೊಂಡಿಲಿನಿಂದ ಸಿಂಹವನ್ನು ತನ್ನ ಹಣೆಯ ಮೇಲಿಂದ ಕಿತ್ತು ದೂರಕ್ಕೆ ಎಸೆಯಿತು,ಕಾಲು ಮುರಿದು ತಲೆ ತಿರುಗುತ್ತಿದ್ದರೂ ಸಿಂಹ "ನಿನಗೆ ಉತ್ತರ ಗೊತ್ತಿಲ್ಲದಿದ್ದರೆ ಕೋಪ ಮಾಡಿಕೊಳ್ಳಬೇಡ ಗಜರಾಜ"ಎಂದು ಗೊಣಗುತ್ತಾ ಗುಹೆ ಸೇರಿತು.


 


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಕನಕಾಪುರ ನಾರಾಯಣ

ಕನ್ನಡ ಕಲಿಸುವುದು, ಕನ್ನಡ ಸಂಘಟನೆ, ಸಮಾಜ ಸೇವೆ ಮುಂದಾಳತ್ವ, ಕಥೆ, ಲೇಖನ ಬರಹಗಳು, ಸಂಘ ಸಂಸ್ಥೆ ಕಾರ್ಯಕ್ರಮ ನಿರ್ವಹಣೆ ಇವೇ ಮುಂತಾದ ಕೆಲಸ  à²¬à²¿à²¡à³à²µà²¿à²¨à²²à³à²²à²¿ ತೊಡಗಿಸಿಕೊಂಡಿದ್ದು. ಸಂಸಾರದಲ್ಲಿ ಸತಿಯ ಪ್ರೀತಿ ಮತ್ತು ಎರಡು ಮಕ್ಕಳ ತಂದೆತನದ ಜವಾಬ್ದಾರಿ.

ನೂರಾರು ಸಣ್ಣಕಥೆಗಳನ್ನು ಈ ವೆಬ್ಸೈಟ್ ನಲ್ಲಿ ಬರೆದಿರುವುದಲ್ಲದೇ, ಸ್ವಂತ ಅನುಭವ ಅಭಿಪ್ರಾಯ ವ್ಯಕ್ತಪಡಿಸಲು http://chakkemoggu.wordpress.com/ à²Žà²‚ಬ ಬ್ಲಾಗ್ ನಲ್ಲೂ ಇವರ ಲೇಖನ ಕಾಣಹುದು.ಸಿಡ್ನಿಯಲ್ಲಿ ಸುಗಮ ಗಾನ ಸಮಾಜ, ಹೊರನಾಡ ಚಿಲುಮೆ ಕನ್ನಡದ ಮೊದಲ ಇ ಮಾಸಪತ್ರಿಕೆ,ಮೂರು ಕನ್ನಡ ವಾರಾಂತ್ಯದ ಶಾಲೆಗಳ ಆರಂಭಕ್ಕೂ ಕಾರಣರಾದವರಲ್ಲಿ ಮುಖ್ಯಸ್ಥರು.

 


ಶ್ರೀ. ಕನಕಾಪುರ ನಾರಾಯಣ ಅವರಿಂದ ಮತ್ತಷ್ಟು ಲೇಖನಗಳು


pictureವಿಚಿತ್ರ ಲೋಕ
pictureದೂರದೃಷ್ಟಿ
pictureಬೆಕ್ಕು ಬಾವುಲಿ
pictureಧರ್ಮ
pictureಗಡ್ಡ
pictureಗಾಂಪರ ಗುರು(ಹಾಸ್ಯ)
pictureಮದರ್ಸ್ ಡೇ
pictureಸುಂದರಾಂಗ !
pictureಹಗಲು - ಕನಸು (ಹಾಸ್ಯ)
pictureಮೆಟ್ಟಿಲು:(ಹಾಸ್ಯ)

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2025