ನ್ಯಾಯ-ನಾಣ್ಯ

ಅಕ್ಬರನ ಆಸ್ತಾನದಲ್ಲಿ ಬೀರಬಲ್ ಬಹಳ ಚತುರ ಎನಿಸಿದ್ದ.ಇದನ್ನು ಕಂಡಿದ್ದ ಇತರರು ಆತನಿಗೆ ಏನಾದರೂ ಮಾಡಿ ಮೂರ್ಖನ ಪಟ್ಟ ಕಟ್ಟಲು ನಿರ್ಧರಿಸಿದರು.ಒಮ್ಮೆ ಬೀರಬಲ್ ಸಭೆಗೆ ಬಂದಾಗ ರಾಜ ಅಕ್ಬರ್ ಎಲ್ಲರ ಸಲಹೆಯಂತೆ "ಬೀರಬಲ್ ನಿನಗೆ ನ್ಯಾಯ ಬೇಕೋ ಅಥವಾ ಚಿನ್ನದ ನಾಣ್ಯ ಬೇಕೋ"ಎಂದ.ಬೀರಬಲ್ "ನನಗೆ ನಾಣ್ಯ ಬೇಕು" ಎಂದ.ಅದಕ್ಕೆ ಎಲ್ಲರೂ ತಾವು ಹೂಡಿದ್ದ ಸಂಚು ಸಾರ್ಥಕವಾಯಿತು ಎಂದು ಸಂತೋಷದಿಂದ ನಕ್ಕರು.ಅಕ್ಬರ್ ಹೇಳಿದ "ಬೀರಬಲ್ ನಾನೇನೋ ನೀನು ಹಣದಾಸೆ ಪಡುವವನಲ್ಲ ಎಂದು ಕೊಂಡಿದ್ದೆ,ಆದರೆ ನೀನು ನನಗೆ ನಿರಾಸೆ ಮಾಡಿದೆ.ಎಲ್ಲರೂ ನೆನೆಸಿದಂತೆಯೇ ನೀನು ನಡೆದೆ".ಅದಕ್ಕೆ ಬೀರಬಲ್ "ಸ್ವಾಮಿ ಯಾರಲ್ಲಿ ಏನಿಲ್ಲವೋ ಅದನ್ನೇ ಬಯಸುತ್ತಾರೆ,ನನಗೆ ನಿಮ್ಮ ರಾಜ್ಯದಲ್ಲಿ ನ್ಯಾಯ ಸಿಕ್ಕಿದ್ದೆ,ಹಣದ ಅಭಾವ ಇರುವುದರಿಂದ ನಾಣ್ಯ ಕೇಳಿದೆ"ಎಂದು ಉತ್ತರಿಸಿದ.ಅಕ್ಬರನಿಗೆ ವಿನಾಕಾ ಬೀರಬಲ್ಲನನ್ನು ಪರೀಕ್ಷಿಸಿದ್ದಕ್ಕಾಗಿ ನಾಚಿಕೆಯಾಯಿತು.