ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ನ್ಯಾಯ-ನಾಣ್ಯ

picture

ಅಕ್ಬರನ ಆಸ್ತಾನದಲ್ಲಿ ಬೀರಬಲ್ ಬಹಳ ಚತುರ ಎನಿಸಿದ್ದ.ಇದನ್ನು ಕಂಡಿದ್ದ ಇತರರು ಆತನಿಗೆ ಏನಾದರೂ ಮಾಡಿ ಮೂರ್ಖನ ಪಟ್ಟ ಕಟ್ಟಲು ನಿರ್ಧರಿಸಿದರು.ಒಮ್ಮೆ ಬೀರಬಲ್ ಸಭೆಗೆ ಬಂದಾಗ ರಾಜ ಅಕ್ಬರ್ ಎಲ್ಲರ ಸಲಹೆಯಂತೆ "ಬೀರಬಲ್ ನಿನಗೆ ನ್ಯಾಯ ಬೇಕೋ ಅಥವಾ ಚಿನ್ನದ ನಾಣ್ಯ ಬೇಕೋ"ಎಂದ.ಬೀರಬಲ್ "ನನಗೆ ನಾಣ್ಯ ಬೇಕು" ಎಂದ.ಅದಕ್ಕೆ ಎಲ್ಲರೂ ತಾವು ಹೂಡಿದ್ದ ಸಂಚು ಸಾರ್ಥಕವಾಯಿತು ಎಂದು ಸಂತೋಷದಿಂದ ನಕ್ಕರು.ಅಕ್ಬರ್ ಹೇಳಿದ "ಬೀರಬಲ್ ನಾನೇನೋ ನೀನು ಹಣದಾಸೆ ಪಡುವವನಲ್ಲ ಎಂದು ಕೊಂಡಿದ್ದೆ,ಆದರೆ ನೀನು ನನಗೆ ನಿರಾಸೆ ಮಾಡಿದೆ.ಎಲ್ಲರೂ ನೆನೆಸಿದಂತೆಯೇ ನೀನು ನಡೆದೆ".ಅದಕ್ಕೆ ಬೀರಬಲ್ "ಸ್ವಾಮಿ ಯಾರಲ್ಲಿ ಏನಿಲ್ಲವೋ ಅದನ್ನೇ ಬಯಸುತ್ತಾರೆ,ನನಗೆ ನಿಮ್ಮ ರಾಜ್ಯದಲ್ಲಿ ನ್ಯಾಯ ಸಿಕ್ಕಿದ್ದೆ,ಹಣದ ಅಭಾವ ಇರುವುದರಿಂದ ನಾಣ್ಯ ಕೇಳಿದೆ"ಎಂದು ಉತ್ತರಿಸಿದ.ಅಕ್ಬರನಿಗೆ ವಿನಾಕಾ ಬೀರಬಲ್ಲನನ್ನು ಪರೀಕ್ಷಿಸಿದ್ದಕ್ಕಾಗಿ ನಾಚಿಕೆಯಾಯಿತು.

 


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಕನಕಾಪುರ ನಾರಾಯಣ

ಕನ್ನಡ ಕಲಿಸುವುದು, ಕನ್ನಡ ಸಂಘಟನೆ, ಸಮಾಜ ಸೇವೆ ಮುಂದಾಳತ್ವ, ಕಥೆ, ಲೇಖನ ಬರಹಗಳು, ಸಂಘ ಸಂಸ್ಥೆ ಕಾರ್ಯಕ್ರಮ ನಿರ್ವಹಣೆ ಇವೇ ಮುಂತಾದ ಕೆಲಸ  ಬಿಡುವಿನಲ್ಲಿ ತೊಡಗಿಸಿಕೊಂಡಿದ್ದು. ಸಂಸಾರದಲ್ಲಿ ಸತಿಯ ಪ್ರೀತಿ ಮತ್ತು ಎರಡು ಮಕ್ಕಳ ತಂದೆತನದ ಜವಾಬ್ದಾರಿ.

ನೂರಾರು ಸಣ್ಣಕಥೆಗಳನ್ನು ಈ ವೆಬ್ಸೈಟ್ ನಲ್ಲಿ ಬರೆದಿರುವುದಲ್ಲದೇ, ಸ್ವಂತ ಅನುಭವ ಅಭಿಪ್ರಾಯ ವ್ಯಕ್ತಪಡಿಸಲು http://chakkemoggu.wordpress.com/ ಎಂಬ ಬ್ಲಾಗ್ ನಲ್ಲೂ ಇವರ ಲೇಖನ ಕಾಣಹುದು.ಸಿಡ್ನಿಯಲ್ಲಿ ಸುಗಮ ಗಾನ ಸಮಾಜ, ಹೊರನಾಡ ಚಿಲುಮೆ ಕನ್ನಡದ ಮೊದಲ ಇ ಮಾಸಪತ್ರಿಕೆ,ಮೂರು ಕನ್ನಡ ವಾರಾಂತ್ಯದ ಶಾಲೆಗಳ ಆರಂಭಕ್ಕೂ ಕಾರಣರಾದವರಲ್ಲಿ ಮುಖ್ಯಸ್ಥರು.

 


ಶ್ರೀ. ಕನಕಾಪುರ ನಾರಾಯಣ ಅವರಿಂದ ಮತ್ತಷ್ಟು ಲೇಖನಗಳು


pictureವಿಚಿತ್ರ ಲೋಕ
pictureದೂರದೃಷ್ಟಿ
pictureಬೆಕ್ಕು ಬಾವುಲಿ
pictureಧರ್ಮ
pictureಗಡ್ಡ
pictureಗಾಂಪರ ಗುರು(ಹಾಸ್ಯ)
pictureಮದರ್ಸ್ ಡೇ
pictureಸುಂದರಾಂಗ !
pictureಹಗಲು - ಕನಸು (ಹಾಸ್ಯ)
pictureಮೆಟ್ಟಿಲು:(ಹಾಸ್ಯ)

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2023