ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ಪ್ರಶ್ನೆಗೆ ತಕ್ಕ ಉತ್ತರ(ಹಾಸ್ಯ)

picture

ತಿಮ್ಮ ದನ ಕಾಯುತ್ತಿದ್ದ. ಅಲ್ಲಿಗೆ ಒಬ್ಬ ಬೇಟೆಗಾರನು ತನ್ನ ಕುದುರೆಯ ಮೇಲೆ ಸವಾರಿ ಮಾಡುತ್ತಾ ವೇಗದಿಂದ ಬಂದು ಅವಸರದಿಂದ "ಏಯ್ ಗೊಲ್ಲ, ಈ ಕಡೆ ಯಾವ್ದಾದ್ರೂ ಕಾಡುಪಾಣಿ ಹೋಗಿತ್ತಾ?" ಎಂದ.ಅದಕ್ಕೆ ತಿಮ್ಮ "ಹಾ! ಹೌದು ಒಂದು ಕಾಡು ಹಂದಿ ಹೋಗಿತ್ತು"ಎಂದ.ಬೇಟೆಗಾರ ಅದೇ ದಿಕ್ಕಿನಲ್ಲಿ ಪ್ರಯಾಣಿಸಿ ಸ್ವಲ್ಪ ಹೊತ್ತಿನ ಬಳಿಕ ಮರಳಿ ಬಂದು"ಎಲ್ಲಿ ಕಾಡುಹಂದಿ? ಯಾವ ಗುರುತೂ ಕಾಣ್ತಿಲ್ಲ? ನಿಜವಾಗಿಯೂ ನೀನು ನೋಡಿದ್ಯಾ?"ಎಂದು ಪ್ರಶ್ನಿಸಿದ." ಹೌದೂ ನನ್ನ ಕಣ್ಣಾರೆ ನೋಡೀವ್ನಿ ಇದೇ ದಿಕ್ಕಿನಲ್ಲಿ ಹೋಯ್ತು ಸುಮಾರು ಎರಡು ವರ್ಷದ ಹಿಂದೆ" ಎನ್ನಬೇಕೇ.


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಕನಕಾಪುರ ನಾರಾಯಣ

ಕನ್ನಡ ಕಲಿಸುವುದು, ಕನ್ನಡ ಸಂಘಟನೆ, ಸಮಾಜ ಸೇವೆ ಮುಂದಾಳತ್ವ, ಕಥೆ, ಲೇಖನ ಬರಹಗಳು, ಸಂಘ ಸಂಸ್ಥೆ ಕಾರ್ಯಕ್ರಮ ನಿರ್ವಹಣೆ ಇವೇ ಮುಂತಾದ ಕೆಲಸ  ಬಿಡುವಿನಲ್ಲಿ ತೊಡಗಿಸಿಕೊಂಡಿದ್ದು. ಸಂಸಾರದಲ್ಲಿ ಸತಿಯ ಪ್ರೀತಿ ಮತ್ತು ಎರಡು ಮಕ್ಕಳ ತಂದೆತನದ ಜವಾಬ್ದಾರಿ.

ನೂರಾರು ಸಣ್ಣಕಥೆಗಳನ್ನು ಈ ವೆಬ್ಸೈಟ್ ನಲ್ಲಿ ಬರೆದಿರುವುದಲ್ಲದೇ, ಸ್ವಂತ ಅನುಭವ ಅಭಿಪ್ರಾಯ ವ್ಯಕ್ತಪಡಿಸಲು http://chakkemoggu.wordpress.com/ ಎಂಬ ಬ್ಲಾಗ್ ನಲ್ಲೂ ಇವರ ಲೇಖನ ಕಾಣಹುದು.ಸಿಡ್ನಿಯಲ್ಲಿ ಸುಗಮ ಗಾನ ಸಮಾಜ, ಹೊರನಾಡ ಚಿಲುಮೆ ಕನ್ನಡದ ಮೊದಲ ಇ ಮಾಸಪತ್ರಿಕೆ,ಮೂರು ಕನ್ನಡ ವಾರಾಂತ್ಯದ ಶಾಲೆಗಳ ಆರಂಭಕ್ಕೂ ಕಾರಣರಾದವರಲ್ಲಿ ಮುಖ್ಯಸ್ಥರು.

 


ಶ್ರೀ. ಕನಕಾಪುರ ನಾರಾಯಣ ಅವರಿಂದ ಮತ್ತಷ್ಟು ಲೇಖನಗಳು


pictureವಿಚಿತ್ರ ಲೋಕ
pictureದೂರದೃಷ್ಟಿ
pictureಬೆಕ್ಕು ಬಾವುಲಿ
pictureಧರ್ಮ
pictureಗಡ್ಡ
pictureಗಾಂಪರ ಗುರು(ಹಾಸ್ಯ)
pictureಮದರ್ಸ್ ಡೇ
pictureಸುಂದರಾಂಗ !
pictureಹಗಲು - ಕನಸು (ಹಾಸ್ಯ)
pictureಮೆಟ್ಟಿಲು:(ಹಾಸ್ಯ)

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2023