ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ಲೋಕದ ಡೊಂಕ

picture

ಒಬ್ಬ ರಾಜನು ದೊಡ್ಡದಾದ ತನ್ನ ಸಾಮ್ರಾಜ್ಯವನ್ನು ನೋಡಲು ರಥವನ್ನೇರಿ ಹೊರಟ.ಊರುಗಳೆಲ್ಲಾ ಸುತ್ತಿ ಬಂದ ನಂತರ ಸಭೆ ಕರೆದ "ರಾಜ್ಯದ ಹಾದಿ ಬಹು ಕೆಟ್ಟದಾಗಿದೆ ಅಲ್ಲಿ ನನಗೆ ನಡೆಯಲು ಸಾಧ್ಯವಿಲ್ಲ,ಅದಕ್ಕಾಗಿ ಎಲ್ಲಾ ರಸ್ತೆಗೂ ಚರ್ಮದ ಕಂಬಳಿ ಹಾಸಿಬಿಡಿ"ಎಂದು ಆಜ್ಞೆ ಮಾಡಿದ.ಅಷ್ಟು ದೊಡ್ಡ ಊರಿನ ಎಲ್ಲಾ ದಾರಿಗೂ ಚರ್ಮವನ್ನು ಒದಗಿಸಲು ಅದೆಷ್ಟು ಪ್ರಾಣಿಗಳು ಬೇಕು? ಅವುಗಳ ಹತ್ಯೆ ಆಗಬೇಕು? ಎಂದು ಜಾಣತನದಿಂದ ಚಿಂತಿಸಿದ ಬುದ್ಧಿವಂತನು" ಸ್ವಾಮೀ ತಾವೇ ಏಕೆ ಒಂದು ಮೆತ್ತನೆಯ ಚರ್ಮದ ಪಾದರಕ್ಷೆಯನ್ನು ಮಾಡಿಸಿಕೊಳ್ಳಬಾರದು?"ಎಂದು ಕೇಳಿದ.ಅವನ ಸಲಹೆ ಎಲ್ಲರಿಗೂ ಹಿಡಿಸಿತು.ರಾಜನೂ ಒಪ್ಪಿದ.ಮೆಚ್ಚಿ ಉಡುಗೊರೆಯಿತ್ತ.

ನೀತಿ: ಪ್ರಪಂಚವನ್ನು ಬದಲಾಯಿಸುವ ಮೊದಲು ನಮ್ಮನ್ನು ನಾವೇ ಏಕೆ ಬದಲಾಯಿಸಿಕೊಳ್ಳಬಾರದು?

 


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಕನಕಾಪುರ ನಾರಾಯಣ

ಕನ್ನಡ ಕಲಿಸುವುದು, ಕನ್ನಡ ಸಂಘಟನೆ, ಸಮಾಜ ಸೇವೆ ಮುಂದಾಳತ್ವ, ಕಥೆ, ಲೇಖನ ಬರಹಗಳು, ಸಂಘ ಸಂಸ್ಥೆ ಕಾರ್ಯಕ್ರಮ ನಿರ್ವಹಣೆ ಇವೇ ಮುಂತಾದ ಕೆಲಸ  à²¬à²¿à²¡à³à²µà²¿à²¨à²²à³à²²à²¿ ತೊಡಗಿಸಿಕೊಂಡಿದ್ದು. ಸಂಸಾರದಲ್ಲಿ ಸತಿಯ ಪ್ರೀತಿ ಮತ್ತು ಎರಡು ಮಕ್ಕಳ ತಂದೆತನದ ಜವಾಬ್ದಾರಿ.

ನೂರಾರು ಸಣ್ಣಕಥೆಗಳನ್ನು ಈ ವೆಬ್ಸೈಟ್ ನಲ್ಲಿ ಬರೆದಿರುವುದಲ್ಲದೇ, ಸ್ವಂತ ಅನುಭವ ಅಭಿಪ್ರಾಯ ವ್ಯಕ್ತಪಡಿಸಲು http://chakkemoggu.wordpress.com/ à²Žà²‚ಬ ಬ್ಲಾಗ್ ನಲ್ಲೂ ಇವರ ಲೇಖನ ಕಾಣಹುದು.ಸಿಡ್ನಿಯಲ್ಲಿ ಸುಗಮ ಗಾನ ಸಮಾಜ, ಹೊರನಾಡ ಚಿಲುಮೆ ಕನ್ನಡದ ಮೊದಲ ಇ ಮಾಸಪತ್ರಿಕೆ,ಮೂರು ಕನ್ನಡ ವಾರಾಂತ್ಯದ ಶಾಲೆಗಳ ಆರಂಭಕ್ಕೂ ಕಾರಣರಾದವರಲ್ಲಿ ಮುಖ್ಯಸ್ಥರು.

 


ಶ್ರೀ. ಕನಕಾಪುರ ನಾರಾಯಣ ಅವರಿಂದ ಮತ್ತಷ್ಟು ಲೇಖನಗಳು


pictureವಿಚಿತ್ರ ಲೋಕ
pictureದೂರದೃಷ್ಟಿ
pictureಬೆಕ್ಕು ಬಾವುಲಿ
pictureಧರ್ಮ
pictureಗಡ್ಡ
pictureಗಾಂಪರ ಗುರು(ಹಾಸ್ಯ)
pictureಮದರ್ಸ್ ಡೇ
pictureಸುಂದರಾಂಗ !
pictureಹಗಲು - ಕನಸು (ಹಾಸ್ಯ)
pictureಮೆಟ್ಟಿಲು:(ಹಾಸ್ಯ)

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2025